ಭಾವಗೀತೆ | ತಂಗಾಳಿ ತಂದ ಬಯಕೆ

December 1, 2020
10:59 PM
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಾಯಾಮೃಗ ಮಾಯಾಮೃಗ….
January 30, 2026
7:35 AM
by: ಪ್ರಬಂಧ ಅಂಬುತೀರ್ಥ
ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ
January 29, 2026
9:31 PM
by: ಮಹೇಶ್ ಪುಚ್ಚಪ್ಪಾಡಿ
ಮಕ್ಕಳಲ್ಲಿ ಗುಣ ಬೆಳೆಸುವ ಹೊಣೆ ಶಾಲೆಗಳಿಗಿಲ್ಲವೆ?
January 28, 2026
8:18 PM
by: ಡಾ.ಚಂದ್ರಶೇಖರ ದಾಮ್ಲೆ
ಹಳ್ಳಿ ಬದುಕು ಶಾಪವಲ್ಲ… ಸಮಾಜದ ಮನಸ್ಥಿತಿ ಶಾಪ…!
January 28, 2026
7:09 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror