ಭಾವಗೀತೆ | ತಂಗಾಳಿ ತಂದ ಬಯಕೆ

December 1, 2020
10:59 PM
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕುಂಭಸ್ನಾನ ಮತ್ತು ವಿಜ್ಞಾನ
February 27, 2025
9:25 PM
by: ಡಾ.ಚಂದ್ರಶೇಖರ ದಾಮ್ಲೆ
“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…
February 26, 2025
8:21 AM
by: ಮಹೇಶ್ ಪುಚ್ಚಪ್ಪಾಡಿ
ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?
February 24, 2025
9:25 PM
by: ರಮೇಶ್‌ ದೇಲಂಪಾಡಿ
ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು
February 20, 2025
7:14 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror