ಭಾವಗೀತೆ | ತಂಗಾಳಿ ತಂದ ಬಯಕೆ

December 1, 2020
10:59 PM
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”
March 7, 2026
10:14 PM
by: ದಿವ್ಯ ಮಹೇಶ್
ಅಂಕಗಳಾಚೆಗೆ ಶಿಕ್ಷಣದ ಉದ್ದೇಶ
March 6, 2026
6:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬಯಕೆ, ಕಾಮ, ಆಕರ್ಷಣೆ, ಪ್ರೀತಿ ಮತ್ತು ಪ್ರೇಮ – ಜೀವನದ ಅಂತರಂಗದ ಹಂತಗಳು
February 28, 2026
7:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಮನೆಯಲ್ಲೇ ಸುಲಭವಾಗಿ ಮಾಡುವ ಎಳೆಯ ಹಲಸಿನ ಕಾಯಿ ಸುಕ್ಕ
February 28, 2026
7:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror