ಭಾವಗೀತೆ | ತಂಗಾಳಿ ತಂದ ಬಯಕೆ

December 1, 2020
10:59 PM
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ – ಎಳೆಯ ಹಲಸಿನ ಕಾಯಿ ಬಾಲ್ : ಕರಕರಾ, ರುಚಿಕರ ಮತ್ತು ಆರೋಗ್ಯಕರ ಸ್ನ್ಯಾಕ್
April 11, 2026
6:16 PM
by: ದಿವ್ಯ ಮಹೇಶ್
ಕುಟುಂಬದಲ್ಲೇ ಆರೋಗ್ಯದ ಬೀಜ – ಕುಟುಂಬದಲ್ಲಿ ಆರೋಗ್ಯಕರ ಅಭ್ಯಾಸಗಳ ಬೆಳವಣಿಗೆ
April 10, 2026
6:11 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror