ಭಾವಗೀತೆ | ತಂಗಾಳಿ ತಂದ ಬಯಕೆ

December 1, 2020
10:59 PM
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..
August 21, 2026
6:28 AM
by: ಮಹೇಶ್ ಪುಚ್ಚಪ್ಪಾಡಿ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror