ಭಾವಗೀತೆ | ತಂಗಾಳಿ ತಂದ ಬಯಕೆ

December 1, 2020
10:59 PM
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?
July 19, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?
July 12, 2026
11:57 AM
by: ಮಹೇಶ್ ಪುಚ್ಚಪ್ಪಾಡಿ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
ವಿವಾಹದ ಬದಲಾಗುತ್ತಿರುವ ಮುಖ
July 5, 2026
2:16 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror