ಭಾವಗೀತೆ | ತಂಗಾಳಿ ತಂದ ಬಯಕೆ

December 1, 2020
10:59 PM
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS

You cannot copy content of this page - Copyright -The Rural Mirror