ಸುಳ್ಯ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಿದರು.
ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ ಜೇಸಿಗಳ ಸಂಘದ ಅಧ್ಯಕ್ಷರಾದ ಜೇಸಿ ಪಿ ಎಸ್ ಗಂಗಾಧರ್ ಮತ್ತು ಜೇಸಿ ಎಂ ಬಿ ಸದಾಶಿವ ಅವರು ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಜೇಸಿ ಎಸ್ ಆರ್ ಸೂರಯ್ಯ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಹಿರಿಯ ಜೇಸಿಗಳಾದ ಜೇಸಿ ಚಂದ್ರಶೇಖರ್ ಪೇರಾಲು , ಜೇಸಿ ಕೆ ಎಮ್ ಮುಸ್ತಫಾ , ಜೇಸಿ ದಿನೇಶ್ ಮಡಪ್ಪಾಡಿ , ಜೇಸಿ ದಿನೇಶ್ ಅಂಬೆಕಲ್ಲು ,ಜೇಸಿ ಕೆ ಟಿ ವಿಶ್ವನಾಥ್ , ಜೇಸಿ ಲೋಕೇಶ್ ಪೆರ್ಲಂಪಾಡಿ ಇನ್ನಿತರರು ಉಪಸ್ಥಿತರಿದ್ದರು. ಸಾಹಿತಿ ಮತ್ತು ಗಾಯಕ ಭೀಮರಾವ್ ವಾಷ್ಠರ್ ರವರು ಕನ್ನಡ ರಾಜ್ಯೋತ್ಸವದ ಗೀತೆಗಳನ್ನು ಹಾಡಿದರು .
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…