#Arecanut | ಭೂತಾನ್‌ ನಿಂದ ಹಸಿ ಅಡಿಕೆ ಆಮದು | ಭಾರತದ ಅಡಿಕೆಗೆ ಯಾವುದೇ ಪರಿಣಾಮ ಇಲ್ಲ | ಹಾಗಿದ್ದರೂ ಅಡಿಕೆ ಧಾರಣೆ ಏಕೆ ಕುಸಿಯುತ್ತಿದೆ..?

August 16, 2023
2:56 PM
ಭೂತಾನ್‌ನಿಂದ ಹಸಿ ಅಡಿಕೆ ಆಮದು ಆದರೂ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಂ ಬೀರದು ಎಂದು ಎಲ್ಲರೂ ಹೇಳುತ್ತಲೇ ಇದ್ದಾರೆ. ಹಾಗಿದ್ದರೂ ಅಡಿಕೆ ಧಾರಣೆ ಕುಸಿಯುತ್ತಿದೆ. ಈಗ ಹಲವು ಕಡೆ ಅಡಿಕೆ ಕೊಯ್ಲು ಆರಂಭವಾಗುತ್ತದೆ. ಅದೇ ವೇಳೆ ಮಾರುಕಟ್ಟೆಯೂ ಕುಸಿದಿದೆ. ಇದರ ಹಿನ್ನೆಲೆ ಏನು ಎಂದು ಕೃಷಿಕ ಪ್ರಬಂಧ ಅಂಬುತೀರ್ಥ ಪ್ರಶ್ನಿಸಿದ್ದಾರೆ.

ಭೂತಾನ್ ನಿಂದ ಹಸಿ ಅಡಿಕೆ ಆಮದು.. ದೇಶಿ ಅಡಿಕೆ ದರಕ್ಕೆ ಯಾವುದೇ ಪರಿಣಾಮ ಬೀರದು.. ಈ ಹೇಳಿಕೆಯನ್ನು ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರು ಸೇರಿದಂತೆ ಎಲ್ಲಾ ಪ್ರಮುಖ ಸಹಕಾರಿಗಳೂ ನೀಡುತ್ತಿದ್ದಾರೆ. ಆದರೆ ಈ ಭೂತಾನ್ ಅಡಿಕೆ ಆಮದಿನ “ಮುಟ್ಟಸ” ಮಾಡಿದ ದಿನದಿಂದ ಅಡಿಕೆ ದರ ಕುಸಿಯುತ್ತಲೇ ಇದೆ. ಇದು ಏಕೆ?

Advertisement
Advertisement
Advertisement
Advertisement

ಮಲೆನಾಡಿನ ಅಸಂಖ್ಯಾತ ಚಿಕ್ಕ ಅತಿಚಿಕ್ಕ ಅಡಿಕೆ ಬೆಳೆಗಾರರಿಗೆ ಇದೊಂದು ಉಡುಗೊರೆಯನ್ನು ನಮ್ಮ ಸ್ಥಾಪಿತ ಮಾರುಕಟ್ಟೆ ಹಿತಾಸಕ್ತಿಗಳು ನಾವೇ ಅತ್ಯಂತ ಇಷ್ಟಪಟ್ಟು ಗೆಲ್ಲಿಸಿದ ಪಕ್ಷದ ಸರ್ಕಾರದ ಆಡಳಿತ ಯಂತ್ರವನ್ನು “ರಿಪೇರಿ” ಮಾಡಿಕೊಂಡು ಈ “ಬೂತ” ವನ್ನು ಆಮದು ಮಾಡಿ ಅಡಿಕೆ ಬೆಲೆ ಕುಸಿಯುವಂತೆ ಮಾಡುತ್ತಾರೆ. ಹದಿನೇಳು ಸಾವಿರ ಟನ್ ಹಸಿ ಅಡಿಕೆ ಯ ಆಮದಿನ ಜೊತೆಯಲ್ಲಿ ಇನ್ಯಾವ ಯಾವ ತರದ ಆಡಿಕೆ ಆ ಒಪ್ಪಂದ ಅಡಿಯಲ್ಲಿ “ನುಸುಳಿ ಕೊಂಡು “ಆಮದಾಗಿ ಬರುತ್ತದೋ…!! ಗೊತ್ತಿಲ್ಲ..!!

Advertisement

ಬಡ ಮದ್ಯಮ ಚಿಕ್ಕ ಹಿಡುವಳಿಯ ಅಡಿಕೆ ಬೆಳೆಗಾರ ನವೆಂಬರ್ ಡಿಸೆಂಬರ್ ನಲ್ಲಿ ತನ್ನ ಕೃಷಿ ಉತ್ಪನ್ನ ಬಿಸಿ ಬಿಸಿ ಅಡಿಕೆಯನ್ನು ಮಾರುಕಟ್ಟೆಗೆ ಕೊಂಡೊಯ್ದಾಗ ಯಥಾ ಪ್ರಕಾರ ಕೆಂಪಡಿಕೆಗೆ ಕ್ವಿಂಟಾಲ್ ಗೆ ನಲವತ್ತೆರೆಡು ಸಾವಿರ ರೂಪಾಯಿ ಮಾತ್ರ ವಾಗಿರುತ್ತದೆ.. ‌ಈ ಐವತ್ತಾರು ಐವತ್ತೆಂಟು ಸಾವಿರ ರೂಪಾಯಿ ಅಡಿಕೆ ದರ ಅದೃಷ್ಟವಂತ ದೊಡ್ಡ ಅಡಿಕೆ ಬೆಳೆಗಾರರಿಗೆ ಮಾತ್ರ….

ಈಗ ಬಯಲು ಸೀಮೆಯ ಅಡಿಕೆ ಕೊಯ್ಲು ಆರಂಭಿಕವಾಗಿದೆ. ಸೆಪ್ಟೆಂಬರ್ ಅಕ್ಟೋಬರ್ ತಿಂಗಳು ಕಳೆದು ನವೆಂಬರ್ ಹೊತ್ತಿಗೆ ಮಲೆನಾಡಿನ ಅಡಿಕೆ ಬೆಳೆಗಾರ ಸುಗ್ಗಿ ಶುರುಮಾಡುವಾಗ ಬಯಲು ಸೀಮೆಯ ಅಡಿಕೆ ಮಾರುಕಟ್ಟೆ ಗೆ ಬಂದ ಪರಿಣಾಮ ಆಗ ಈ ನೆಪಕ್ಕೆ ಇನ್ನೂ ದರ ಕೆಳಕ್ಕೆ ಕುಸಿದಿರುತ್ತದೆ.

Advertisement

ಒಟ್ಟಿನಲ್ಲಿ ಅಡಿಕೆ ಆಮದಾದರೂ ದರ ಕುಸಿಯೋಲ್ಲ.. ಹುಚ್ಚಾಪಟ್ಟೆ ಅಡಿಕೆ ಬೆಳೆ ವಿಸ್ತರಣೆಯಾದರೂ ಅಡಿಕೆ ದರ ಕುಸಿಯೋಲ್ಲ..
ಆದರೆ ಮಾರುಕಟ್ಟೆಯಲ್ಲಿ ಬೆಲೆ ಮಾತ್ರ ಕಡಿಮೆಯಾಗುತ್ತದೆ. ಈ ಒಗಟಿಗೆ ಯಾರಾದರೂ ಬುದ್ದಿವಂತ ರೈತರು ಉತ್ತರ ಕೊಡುವಿರಾ..?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?
February 24, 2025
9:25 PM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror