Advertisement
Opinion

#Arecanut | ಭೂತಾನ್‌ ನಿಂದ ಹಸಿ ಅಡಿಕೆ ಆಮದು | ಭಾರತದ ಅಡಿಕೆಗೆ ಯಾವುದೇ ಪರಿಣಾಮ ಇಲ್ಲ | ಹಾಗಿದ್ದರೂ ಅಡಿಕೆ ಧಾರಣೆ ಏಕೆ ಕುಸಿಯುತ್ತಿದೆ..?

Share

ಭೂತಾನ್ ನಿಂದ ಹಸಿ ಅಡಿಕೆ ಆಮದು.. ದೇಶಿ ಅಡಿಕೆ ದರಕ್ಕೆ ಯಾವುದೇ ಪರಿಣಾಮ ಬೀರದು.. ಈ ಹೇಳಿಕೆಯನ್ನು ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರು ಸೇರಿದಂತೆ ಎಲ್ಲಾ ಪ್ರಮುಖ ಸಹಕಾರಿಗಳೂ ನೀಡುತ್ತಿದ್ದಾರೆ. ಆದರೆ ಈ ಭೂತಾನ್ ಅಡಿಕೆ ಆಮದಿನ “ಮುಟ್ಟಸ” ಮಾಡಿದ ದಿನದಿಂದ ಅಡಿಕೆ ದರ ಕುಸಿಯುತ್ತಲೇ ಇದೆ. ಇದು ಏಕೆ?

Advertisement
Advertisement

ಮಲೆನಾಡಿನ ಅಸಂಖ್ಯಾತ ಚಿಕ್ಕ ಅತಿಚಿಕ್ಕ ಅಡಿಕೆ ಬೆಳೆಗಾರರಿಗೆ ಇದೊಂದು ಉಡುಗೊರೆಯನ್ನು ನಮ್ಮ ಸ್ಥಾಪಿತ ಮಾರುಕಟ್ಟೆ ಹಿತಾಸಕ್ತಿಗಳು ನಾವೇ ಅತ್ಯಂತ ಇಷ್ಟಪಟ್ಟು ಗೆಲ್ಲಿಸಿದ ಪಕ್ಷದ ಸರ್ಕಾರದ ಆಡಳಿತ ಯಂತ್ರವನ್ನು “ರಿಪೇರಿ” ಮಾಡಿಕೊಂಡು ಈ “ಬೂತ” ವನ್ನು ಆಮದು ಮಾಡಿ ಅಡಿಕೆ ಬೆಲೆ ಕುಸಿಯುವಂತೆ ಮಾಡುತ್ತಾರೆ. ಹದಿನೇಳು ಸಾವಿರ ಟನ್ ಹಸಿ ಅಡಿಕೆ ಯ ಆಮದಿನ ಜೊತೆಯಲ್ಲಿ ಇನ್ಯಾವ ಯಾವ ತರದ ಆಡಿಕೆ ಆ ಒಪ್ಪಂದ ಅಡಿಯಲ್ಲಿ “ನುಸುಳಿ ಕೊಂಡು “ಆಮದಾಗಿ ಬರುತ್ತದೋ…!! ಗೊತ್ತಿಲ್ಲ..!!

ಬಡ ಮದ್ಯಮ ಚಿಕ್ಕ ಹಿಡುವಳಿಯ ಅಡಿಕೆ ಬೆಳೆಗಾರ ನವೆಂಬರ್ ಡಿಸೆಂಬರ್ ನಲ್ಲಿ ತನ್ನ ಕೃಷಿ ಉತ್ಪನ್ನ ಬಿಸಿ ಬಿಸಿ ಅಡಿಕೆಯನ್ನು ಮಾರುಕಟ್ಟೆಗೆ ಕೊಂಡೊಯ್ದಾಗ ಯಥಾ ಪ್ರಕಾರ ಕೆಂಪಡಿಕೆಗೆ ಕ್ವಿಂಟಾಲ್ ಗೆ ನಲವತ್ತೆರೆಡು ಸಾವಿರ ರೂಪಾಯಿ ಮಾತ್ರ ವಾಗಿರುತ್ತದೆ.. ‌ಈ ಐವತ್ತಾರು ಐವತ್ತೆಂಟು ಸಾವಿರ ರೂಪಾಯಿ ಅಡಿಕೆ ದರ ಅದೃಷ್ಟವಂತ ದೊಡ್ಡ ಅಡಿಕೆ ಬೆಳೆಗಾರರಿಗೆ ಮಾತ್ರ….

ಈಗ ಬಯಲು ಸೀಮೆಯ ಅಡಿಕೆ ಕೊಯ್ಲು ಆರಂಭಿಕವಾಗಿದೆ. ಸೆಪ್ಟೆಂಬರ್ ಅಕ್ಟೋಬರ್ ತಿಂಗಳು ಕಳೆದು ನವೆಂಬರ್ ಹೊತ್ತಿಗೆ ಮಲೆನಾಡಿನ ಅಡಿಕೆ ಬೆಳೆಗಾರ ಸುಗ್ಗಿ ಶುರುಮಾಡುವಾಗ ಬಯಲು ಸೀಮೆಯ ಅಡಿಕೆ ಮಾರುಕಟ್ಟೆ ಗೆ ಬಂದ ಪರಿಣಾಮ ಆಗ ಈ ನೆಪಕ್ಕೆ ಇನ್ನೂ ದರ ಕೆಳಕ್ಕೆ ಕುಸಿದಿರುತ್ತದೆ.

ಒಟ್ಟಿನಲ್ಲಿ ಅಡಿಕೆ ಆಮದಾದರೂ ದರ ಕುಸಿಯೋಲ್ಲ.. ಹುಚ್ಚಾಪಟ್ಟೆ ಅಡಿಕೆ ಬೆಳೆ ವಿಸ್ತರಣೆಯಾದರೂ ಅಡಿಕೆ ದರ ಕುಸಿಯೋಲ್ಲ..
ಆದರೆ ಮಾರುಕಟ್ಟೆಯಲ್ಲಿ ಬೆಲೆ ಮಾತ್ರ ಕಡಿಮೆಯಾಗುತ್ತದೆ. ಈ ಒಗಟಿಗೆ ಯಾರಾದರೂ ಬುದ್ದಿವಂತ ರೈತರು ಉತ್ತರ ಕೊಡುವಿರಾ..?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago