Advertisement
Opinion

#Arecanut | ಭೂತಾನ್‌ ನಿಂದ ಹಸಿ ಅಡಿಕೆ ಆಮದು | ಭಾರತದ ಅಡಿಕೆಗೆ ಯಾವುದೇ ಪರಿಣಾಮ ಇಲ್ಲ | ಹಾಗಿದ್ದರೂ ಅಡಿಕೆ ಧಾರಣೆ ಏಕೆ ಕುಸಿಯುತ್ತಿದೆ..?

Share

ಭೂತಾನ್ ನಿಂದ ಹಸಿ ಅಡಿಕೆ ಆಮದು.. ದೇಶಿ ಅಡಿಕೆ ದರಕ್ಕೆ ಯಾವುದೇ ಪರಿಣಾಮ ಬೀರದು.. ಈ ಹೇಳಿಕೆಯನ್ನು ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರು ಸೇರಿದಂತೆ ಎಲ್ಲಾ ಪ್ರಮುಖ ಸಹಕಾರಿಗಳೂ ನೀಡುತ್ತಿದ್ದಾರೆ. ಆದರೆ ಈ ಭೂತಾನ್ ಅಡಿಕೆ ಆಮದಿನ “ಮುಟ್ಟಸ” ಮಾಡಿದ ದಿನದಿಂದ ಅಡಿಕೆ ದರ ಕುಸಿಯುತ್ತಲೇ ಇದೆ. ಇದು ಏಕೆ?

ಮಲೆನಾಡಿನ ಅಸಂಖ್ಯಾತ ಚಿಕ್ಕ ಅತಿಚಿಕ್ಕ ಅಡಿಕೆ ಬೆಳೆಗಾರರಿಗೆ ಇದೊಂದು ಉಡುಗೊರೆಯನ್ನು ನಮ್ಮ ಸ್ಥಾಪಿತ ಮಾರುಕಟ್ಟೆ ಹಿತಾಸಕ್ತಿಗಳು ನಾವೇ ಅತ್ಯಂತ ಇಷ್ಟಪಟ್ಟು ಗೆಲ್ಲಿಸಿದ ಪಕ್ಷದ ಸರ್ಕಾರದ ಆಡಳಿತ ಯಂತ್ರವನ್ನು “ರಿಪೇರಿ” ಮಾಡಿಕೊಂಡು ಈ “ಬೂತ” ವನ್ನು ಆಮದು ಮಾಡಿ ಅಡಿಕೆ ಬೆಲೆ ಕುಸಿಯುವಂತೆ ಮಾಡುತ್ತಾರೆ. ಹದಿನೇಳು ಸಾವಿರ ಟನ್ ಹಸಿ ಅಡಿಕೆ ಯ ಆಮದಿನ ಜೊತೆಯಲ್ಲಿ ಇನ್ಯಾವ ಯಾವ ತರದ ಆಡಿಕೆ ಆ ಒಪ್ಪಂದ ಅಡಿಯಲ್ಲಿ “ನುಸುಳಿ ಕೊಂಡು “ಆಮದಾಗಿ ಬರುತ್ತದೋ…!! ಗೊತ್ತಿಲ್ಲ..!!

ಬಡ ಮದ್ಯಮ ಚಿಕ್ಕ ಹಿಡುವಳಿಯ ಅಡಿಕೆ ಬೆಳೆಗಾರ ನವೆಂಬರ್ ಡಿಸೆಂಬರ್ ನಲ್ಲಿ ತನ್ನ ಕೃಷಿ ಉತ್ಪನ್ನ ಬಿಸಿ ಬಿಸಿ ಅಡಿಕೆಯನ್ನು ಮಾರುಕಟ್ಟೆಗೆ ಕೊಂಡೊಯ್ದಾಗ ಯಥಾ ಪ್ರಕಾರ ಕೆಂಪಡಿಕೆಗೆ ಕ್ವಿಂಟಾಲ್ ಗೆ ನಲವತ್ತೆರೆಡು ಸಾವಿರ ರೂಪಾಯಿ ಮಾತ್ರ ವಾಗಿರುತ್ತದೆ.. ‌ಈ ಐವತ್ತಾರು ಐವತ್ತೆಂಟು ಸಾವಿರ ರೂಪಾಯಿ ಅಡಿಕೆ ದರ ಅದೃಷ್ಟವಂತ ದೊಡ್ಡ ಅಡಿಕೆ ಬೆಳೆಗಾರರಿಗೆ ಮಾತ್ರ….

ಈಗ ಬಯಲು ಸೀಮೆಯ ಅಡಿಕೆ ಕೊಯ್ಲು ಆರಂಭಿಕವಾಗಿದೆ. ಸೆಪ್ಟೆಂಬರ್ ಅಕ್ಟೋಬರ್ ತಿಂಗಳು ಕಳೆದು ನವೆಂಬರ್ ಹೊತ್ತಿಗೆ ಮಲೆನಾಡಿನ ಅಡಿಕೆ ಬೆಳೆಗಾರ ಸುಗ್ಗಿ ಶುರುಮಾಡುವಾಗ ಬಯಲು ಸೀಮೆಯ ಅಡಿಕೆ ಮಾರುಕಟ್ಟೆ ಗೆ ಬಂದ ಪರಿಣಾಮ ಆಗ ಈ ನೆಪಕ್ಕೆ ಇನ್ನೂ ದರ ಕೆಳಕ್ಕೆ ಕುಸಿದಿರುತ್ತದೆ.

ಒಟ್ಟಿನಲ್ಲಿ ಅಡಿಕೆ ಆಮದಾದರೂ ದರ ಕುಸಿಯೋಲ್ಲ.. ಹುಚ್ಚಾಪಟ್ಟೆ ಅಡಿಕೆ ಬೆಳೆ ವಿಸ್ತರಣೆಯಾದರೂ ಅಡಿಕೆ ದರ ಕುಸಿಯೋಲ್ಲ..
ಆದರೆ ಮಾರುಕಟ್ಟೆಯಲ್ಲಿ ಬೆಲೆ ಮಾತ್ರ ಕಡಿಮೆಯಾಗುತ್ತದೆ. ಈ ಒಗಟಿಗೆ ಯಾರಾದರೂ ಬುದ್ದಿವಂತ ರೈತರು ಉತ್ತರ ಕೊಡುವಿರಾ..?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

4 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

12 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

13 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

14 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago