Advertisement
Opinion

#Arecanut | ಭೂತಾನ್‌ ನಿಂದ ಹಸಿ ಅಡಿಕೆ ಆಮದು | ಭಾರತದ ಅಡಿಕೆಗೆ ಯಾವುದೇ ಪರಿಣಾಮ ಇಲ್ಲ | ಹಾಗಿದ್ದರೂ ಅಡಿಕೆ ಧಾರಣೆ ಏಕೆ ಕುಸಿಯುತ್ತಿದೆ..?

Share

ಭೂತಾನ್ ನಿಂದ ಹಸಿ ಅಡಿಕೆ ಆಮದು.. ದೇಶಿ ಅಡಿಕೆ ದರಕ್ಕೆ ಯಾವುದೇ ಪರಿಣಾಮ ಬೀರದು.. ಈ ಹೇಳಿಕೆಯನ್ನು ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರು ಸೇರಿದಂತೆ ಎಲ್ಲಾ ಪ್ರಮುಖ ಸಹಕಾರಿಗಳೂ ನೀಡುತ್ತಿದ್ದಾರೆ. ಆದರೆ ಈ ಭೂತಾನ್ ಅಡಿಕೆ ಆಮದಿನ “ಮುಟ್ಟಸ” ಮಾಡಿದ ದಿನದಿಂದ ಅಡಿಕೆ ದರ ಕುಸಿಯುತ್ತಲೇ ಇದೆ. ಇದು ಏಕೆ?

ಮಲೆನಾಡಿನ ಅಸಂಖ್ಯಾತ ಚಿಕ್ಕ ಅತಿಚಿಕ್ಕ ಅಡಿಕೆ ಬೆಳೆಗಾರರಿಗೆ ಇದೊಂದು ಉಡುಗೊರೆಯನ್ನು ನಮ್ಮ ಸ್ಥಾಪಿತ ಮಾರುಕಟ್ಟೆ ಹಿತಾಸಕ್ತಿಗಳು ನಾವೇ ಅತ್ಯಂತ ಇಷ್ಟಪಟ್ಟು ಗೆಲ್ಲಿಸಿದ ಪಕ್ಷದ ಸರ್ಕಾರದ ಆಡಳಿತ ಯಂತ್ರವನ್ನು “ರಿಪೇರಿ” ಮಾಡಿಕೊಂಡು ಈ “ಬೂತ” ವನ್ನು ಆಮದು ಮಾಡಿ ಅಡಿಕೆ ಬೆಲೆ ಕುಸಿಯುವಂತೆ ಮಾಡುತ್ತಾರೆ. ಹದಿನೇಳು ಸಾವಿರ ಟನ್ ಹಸಿ ಅಡಿಕೆ ಯ ಆಮದಿನ ಜೊತೆಯಲ್ಲಿ ಇನ್ಯಾವ ಯಾವ ತರದ ಆಡಿಕೆ ಆ ಒಪ್ಪಂದ ಅಡಿಯಲ್ಲಿ “ನುಸುಳಿ ಕೊಂಡು “ಆಮದಾಗಿ ಬರುತ್ತದೋ…!! ಗೊತ್ತಿಲ್ಲ..!!

ಬಡ ಮದ್ಯಮ ಚಿಕ್ಕ ಹಿಡುವಳಿಯ ಅಡಿಕೆ ಬೆಳೆಗಾರ ನವೆಂಬರ್ ಡಿಸೆಂಬರ್ ನಲ್ಲಿ ತನ್ನ ಕೃಷಿ ಉತ್ಪನ್ನ ಬಿಸಿ ಬಿಸಿ ಅಡಿಕೆಯನ್ನು ಮಾರುಕಟ್ಟೆಗೆ ಕೊಂಡೊಯ್ದಾಗ ಯಥಾ ಪ್ರಕಾರ ಕೆಂಪಡಿಕೆಗೆ ಕ್ವಿಂಟಾಲ್ ಗೆ ನಲವತ್ತೆರೆಡು ಸಾವಿರ ರೂಪಾಯಿ ಮಾತ್ರ ವಾಗಿರುತ್ತದೆ.. ‌ಈ ಐವತ್ತಾರು ಐವತ್ತೆಂಟು ಸಾವಿರ ರೂಪಾಯಿ ಅಡಿಕೆ ದರ ಅದೃಷ್ಟವಂತ ದೊಡ್ಡ ಅಡಿಕೆ ಬೆಳೆಗಾರರಿಗೆ ಮಾತ್ರ….

ಈಗ ಬಯಲು ಸೀಮೆಯ ಅಡಿಕೆ ಕೊಯ್ಲು ಆರಂಭಿಕವಾಗಿದೆ. ಸೆಪ್ಟೆಂಬರ್ ಅಕ್ಟೋಬರ್ ತಿಂಗಳು ಕಳೆದು ನವೆಂಬರ್ ಹೊತ್ತಿಗೆ ಮಲೆನಾಡಿನ ಅಡಿಕೆ ಬೆಳೆಗಾರ ಸುಗ್ಗಿ ಶುರುಮಾಡುವಾಗ ಬಯಲು ಸೀಮೆಯ ಅಡಿಕೆ ಮಾರುಕಟ್ಟೆ ಗೆ ಬಂದ ಪರಿಣಾಮ ಆಗ ಈ ನೆಪಕ್ಕೆ ಇನ್ನೂ ದರ ಕೆಳಕ್ಕೆ ಕುಸಿದಿರುತ್ತದೆ.

ಒಟ್ಟಿನಲ್ಲಿ ಅಡಿಕೆ ಆಮದಾದರೂ ದರ ಕುಸಿಯೋಲ್ಲ.. ಹುಚ್ಚಾಪಟ್ಟೆ ಅಡಿಕೆ ಬೆಳೆ ವಿಸ್ತರಣೆಯಾದರೂ ಅಡಿಕೆ ದರ ಕುಸಿಯೋಲ್ಲ..
ಆದರೆ ಮಾರುಕಟ್ಟೆಯಲ್ಲಿ ಬೆಲೆ ಮಾತ್ರ ಕಡಿಮೆಯಾಗುತ್ತದೆ. ಈ ಒಗಟಿಗೆ ಯಾರಾದರೂ ಬುದ್ದಿವಂತ ರೈತರು ಉತ್ತರ ಕೊಡುವಿರಾ..?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

9 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

17 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago