‘ಇಲ್ಲಿ ಆಗಲ್ಲ’ ಅನ್ನೋದನ್ನು ಮುರಿದ ರೈತ – ಬಿಸಿಲು ನಾಡಿನ ಸ್ಟ್ರಾಬೆರಿ ಕಥೆ

February 8, 2026
6:11 AM
ಬಿಸಿಲು ನಾಡು ಎಂದೇ ಖ್ಯಾತಿಯ ಉತ್ತರ ಕರ್ನಾಟಕದಲ್ಲೂ ಸ್ಟ್ರಾಬೆರಿ ಕೃಷಿ ಸಾಧ್ಯ ಎಂಬುದನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ರೈತ ವೈಜಿನಾಥ್ ನಿಡೋದಾ ತೋರಿಸಿದ್ದಾರೆ. ದಿನಕ್ಕೆ ₹15–16 ಸಾವಿರ ಆದಾಯ ಗಳಿಸುವ ಯಶೋಗಾಥೆ.

ಶೀತ ಪ್ರದೇಶಗಳಲ್ಲಿ ಮಾತ್ರ ಸ್ಟ್ರಾಬೆರಿ ಬೆಳೆಯಲು ಸಾಧ್ಯ ಎಂಬ ಸಾಮಾನ್ಯ ನಂಬಿಕೆ ಇದೆ. ಇದಕ್ಕೆ ಅಪವಾದವಾಗಿ ಬಿಸಿಲನಾಡು ಉತ್ತರ ಕರ್ನಾಟಕದಲ್ಲೂ ಸ್ಟ್ರಾಬೆರಿ ಕೃಷಿ ಯಶಸ್ವಿಯಾಗಬಹುದು ಎಂಬುದನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿಡೋದಾ ಗ್ರಾಮದ ರೈತ ವೈಜಿನಾಥ್ ನಿಡೋದಾ ಅವರು ಪ್ರಾಯೋಗಿಕವಾಗಿ ಸಾಬೀತುಪಡಿಸಿದ್ದಾರೆ.

2024ರಲ್ಲಿ ಅರ್ಧ ಎಕರೆ ಭೂಮಿಯಲ್ಲಿ 10 ಸಾವಿರ ಸ್ಟ್ರಾಬೆರಿ ಸಸಿಗಳನ್ನು ಪ್ಲಾಂಟೇಷನ್ ಮಾಡಿದ ಅವರು, ಮೊದಲ ಪ್ರಯತ್ನದಲ್ಲಿ ನಿರ್ವಹಣಾ ತಪ್ಪುಗಳಿಂದ ಸುಮಾರು 30 ಶೇಕಡಾ ಸಸಿಗಳು ನಾಶವಾಗಿದ್ದವು. ಆದರೆ, ಕಳೆದ ವರ್ಷದ ಅನುಭವದಿಂದ ಪಾಠ ಕಲಿತು ಈ ಬಾರಿ ತಂತ್ರಜ್ಞಾನ ಹಾಗೂ ಕಾಳಜಿಯಲ್ಲಿ ಸುಧಾರಣೆ ಮಾಡಿಕೊಂಡ ಪರಿಣಾಮ, ಈ ವರ್ಷ ಕೇವಲ ಶೇ.5 ರಷ್ಟು ಮಾತ್ರ ಸಸಿಗಳ ಡೆತ್ ರೇಟ್ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಇದನ್ನೂ ಸಂಪೂರ್ಣವಾಗಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಬೀದರ್ ಜಿಲ್ಲೆಯ ವಾತಾವರಣ, ಮಣ್ಣು ಮತ್ತು ನೀರು ಸ್ಟ್ರಾಬೆರಿ ಬೆಳೆಗೆ ಅತ್ಯಂತ ಸೂಕ್ತವಾಗಿದೆ. 15 ರಿಂದ 30 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಇರಬೇಕು. ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರವರೆಗೆ ಪ್ಲಾಂಟೇಷನ್ ಮಾಡಲು ಸೂಕ್ತ ಸಮಯವಾಗಿದ್ದು, ಚಳಿಗಾಲ ಆರಂಭಕ್ಕೂ ಮುನ್ನ ಸಸಿಗಳನ್ನು ನೆಟ್ಟರೆ ಉತ್ತಮ ಫಲ ದೊರೆಯುತ್ತದೆ ಎಂದು ವೈಜಿನಾಥ್ ನಿಡೋದಾ ವಿವರಿಸುತ್ತಾರೆ. ಚಳಿಗಾಲದಲ್ಲಿ ಹೂ ಹಾಗೂ ಹಣ್ಣು ಬಿಡುವ ಪ್ರಮಾಣ ಹೆಚ್ಚಾಗುತ್ತದೆ. ಆದರೆ ಮಾರ್ಚ್ ತಿಂಗಳಲ್ಲಿ ಬೇಸಿಗೆ ಆರಂಭವಾದಂತೆ ಇಳುವರಿ ಕಡಿಮೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಯಶಸ್ಸಿನಿಂದ ಉತ್ತೇಜನಗೊಂಡ ಅವರು 2025ರಲ್ಲಿ 2 ಎಕರೆ ಜಮೀನಿನಲ್ಲಿ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡಿದ್ದಾರೆ. ಈಗಾಗಲೇ ಫಸಲು ಬರಲು ಆರಂಭವಾಗಿದ್ದು, ಪ್ರತಿದಿನ ಸುಮಾರು ₹15,000 ರಿಂದ ₹16,000 ಆದಾಯ ಗಳಿಸುತ್ತಿದ್ದಾರೆ. ಉತ್ತರ ಕರ್ನಾಟಕದ ರೈತರಿಗೆ ಸ್ಟ್ರಾಬೆರಿ ಕೃಷಿ ಹೊಸ ಆರ್ಥಿಕ ಪರ್ಯಾಯವಾಗಿ ಮೂಡಿಬರುತ್ತಿದೆ.

(ಡಿಜಿಟಲ್‌ ಸೋರ್ಸ್)

ಇದನ್ನೂ ಓದಿ…

ಬೀಜದಿಂದ ಪಶುಸಂಗೋಪನೆವರೆಗೆ : ಭಾರತ–ನೇಪಾಳ–ಮಾಲ್ಡೀವ್ಸ್ ಕೃಷಿ ಸಹಕಾರ ವಿಸ್ತರಣೆ

ಓದುಗರ ಅಭಿಪ್ರಾಯಕ್ಕೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ
March 2, 2026
9:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!
March 2, 2026
2:56 PM
by: ಸಾಯಿಶೇಖರ್ ಕರಿಕಳ
ಜಲಾಶಯ ಪಕ್ಕದಲ್ಲೇ ಟ್ಯಾಂಕರ್ ನೀರು | ಅಡಿಕೆ ತೋಟ ಉಳಿಸಿಕೊಳ್ಳಲು ರೈತರ ಹೋರಾಟ
March 2, 2026
1:41 PM
by: ಮಿರರ್‌ ಡೆಸ್ಕ್
ಮಾನವ–ವನ್ಯಜೀವಿ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ
March 2, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror