Advertisement
ಸುದ್ದಿಗಳು

‘ಇಲ್ಲಿ ಆಗಲ್ಲ’ ಅನ್ನೋದನ್ನು ಮುರಿದ ರೈತ – ಬಿಸಿಲು ನಾಡಿನ ಸ್ಟ್ರಾಬೆರಿ ಕಥೆ

Share

ಶೀತ ಪ್ರದೇಶಗಳಲ್ಲಿ ಮಾತ್ರ ಸ್ಟ್ರಾಬೆರಿ ಬೆಳೆಯಲು ಸಾಧ್ಯ ಎಂಬ ಸಾಮಾನ್ಯ ನಂಬಿಕೆ ಇದೆ. ಇದಕ್ಕೆ ಅಪವಾದವಾಗಿ ಬಿಸಿಲನಾಡು ಉತ್ತರ ಕರ್ನಾಟಕದಲ್ಲೂ ಸ್ಟ್ರಾಬೆರಿ ಕೃಷಿ ಯಶಸ್ವಿಯಾಗಬಹುದು ಎಂಬುದನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿಡೋದಾ ಗ್ರಾಮದ ರೈತ ವೈಜಿನಾಥ್ ನಿಡೋದಾ ಅವರು ಪ್ರಾಯೋಗಿಕವಾಗಿ ಸಾಬೀತುಪಡಿಸಿದ್ದಾರೆ.

2024ರಲ್ಲಿ ಅರ್ಧ ಎಕರೆ ಭೂಮಿಯಲ್ಲಿ 10 ಸಾವಿರ ಸ್ಟ್ರಾಬೆರಿ ಸಸಿಗಳನ್ನು ಪ್ಲಾಂಟೇಷನ್ ಮಾಡಿದ ಅವರು, ಮೊದಲ ಪ್ರಯತ್ನದಲ್ಲಿ ನಿರ್ವಹಣಾ ತಪ್ಪುಗಳಿಂದ ಸುಮಾರು 30 ಶೇಕಡಾ ಸಸಿಗಳು ನಾಶವಾಗಿದ್ದವು. ಆದರೆ, ಕಳೆದ ವರ್ಷದ ಅನುಭವದಿಂದ ಪಾಠ ಕಲಿತು ಈ ಬಾರಿ ತಂತ್ರಜ್ಞಾನ ಹಾಗೂ ಕಾಳಜಿಯಲ್ಲಿ ಸುಧಾರಣೆ ಮಾಡಿಕೊಂಡ ಪರಿಣಾಮ, ಈ ವರ್ಷ ಕೇವಲ ಶೇ.5 ರಷ್ಟು ಮಾತ್ರ ಸಸಿಗಳ ಡೆತ್ ರೇಟ್ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಇದನ್ನೂ ಸಂಪೂರ್ಣವಾಗಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಬೀದರ್ ಜಿಲ್ಲೆಯ ವಾತಾವರಣ, ಮಣ್ಣು ಮತ್ತು ನೀರು ಸ್ಟ್ರಾಬೆರಿ ಬೆಳೆಗೆ ಅತ್ಯಂತ ಸೂಕ್ತವಾಗಿದೆ. 15 ರಿಂದ 30 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಇರಬೇಕು. ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರವರೆಗೆ ಪ್ಲಾಂಟೇಷನ್ ಮಾಡಲು ಸೂಕ್ತ ಸಮಯವಾಗಿದ್ದು, ಚಳಿಗಾಲ ಆರಂಭಕ್ಕೂ ಮುನ್ನ ಸಸಿಗಳನ್ನು ನೆಟ್ಟರೆ ಉತ್ತಮ ಫಲ ದೊರೆಯುತ್ತದೆ ಎಂದು ವೈಜಿನಾಥ್ ನಿಡೋದಾ ವಿವರಿಸುತ್ತಾರೆ. ಚಳಿಗಾಲದಲ್ಲಿ ಹೂ ಹಾಗೂ ಹಣ್ಣು ಬಿಡುವ ಪ್ರಮಾಣ ಹೆಚ್ಚಾಗುತ್ತದೆ. ಆದರೆ ಮಾರ್ಚ್ ತಿಂಗಳಲ್ಲಿ ಬೇಸಿಗೆ ಆರಂಭವಾದಂತೆ ಇಳುವರಿ ಕಡಿಮೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಯಶಸ್ಸಿನಿಂದ ಉತ್ತೇಜನಗೊಂಡ ಅವರು 2025ರಲ್ಲಿ 2 ಎಕರೆ ಜಮೀನಿನಲ್ಲಿ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡಿದ್ದಾರೆ. ಈಗಾಗಲೇ ಫಸಲು ಬರಲು ಆರಂಭವಾಗಿದ್ದು, ಪ್ರತಿದಿನ ಸುಮಾರು ₹15,000 ರಿಂದ ₹16,000 ಆದಾಯ ಗಳಿಸುತ್ತಿದ್ದಾರೆ. ಉತ್ತರ ಕರ್ನಾಟಕದ ರೈತರಿಗೆ ಸ್ಟ್ರಾಬೆರಿ ಕೃಷಿ ಹೊಸ ಆರ್ಥಿಕ ಪರ್ಯಾಯವಾಗಿ ಮೂಡಿಬರುತ್ತಿದೆ.

(ಡಿಜಿಟಲ್‌ ಸೋರ್ಸ್)

ಇದನ್ನೂ ಓದಿ…

ಓದುಗರ ಅಭಿಪ್ರಾಯಕ್ಕೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

2 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

3 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

3 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

3 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

19 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

19 hours ago