Advertisement
ಸುದ್ದಿಗಳು

‘ಇಲ್ಲಿ ಆಗಲ್ಲ’ ಅನ್ನೋದನ್ನು ಮುರಿದ ರೈತ – ಬಿಸಿಲು ನಾಡಿನ ಸ್ಟ್ರಾಬೆರಿ ಕಥೆ

Share

ಶೀತ ಪ್ರದೇಶಗಳಲ್ಲಿ ಮಾತ್ರ ಸ್ಟ್ರಾಬೆರಿ ಬೆಳೆಯಲು ಸಾಧ್ಯ ಎಂಬ ಸಾಮಾನ್ಯ ನಂಬಿಕೆ ಇದೆ. ಇದಕ್ಕೆ ಅಪವಾದವಾಗಿ ಬಿಸಿಲನಾಡು ಉತ್ತರ ಕರ್ನಾಟಕದಲ್ಲೂ ಸ್ಟ್ರಾಬೆರಿ ಕೃಷಿ ಯಶಸ್ವಿಯಾಗಬಹುದು ಎಂಬುದನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿಡೋದಾ ಗ್ರಾಮದ ರೈತ ವೈಜಿನಾಥ್ ನಿಡೋದಾ ಅವರು ಪ್ರಾಯೋಗಿಕವಾಗಿ ಸಾಬೀತುಪಡಿಸಿದ್ದಾರೆ.

2024ರಲ್ಲಿ ಅರ್ಧ ಎಕರೆ ಭೂಮಿಯಲ್ಲಿ 10 ಸಾವಿರ ಸ್ಟ್ರಾಬೆರಿ ಸಸಿಗಳನ್ನು ಪ್ಲಾಂಟೇಷನ್ ಮಾಡಿದ ಅವರು, ಮೊದಲ ಪ್ರಯತ್ನದಲ್ಲಿ ನಿರ್ವಹಣಾ ತಪ್ಪುಗಳಿಂದ ಸುಮಾರು 30 ಶೇಕಡಾ ಸಸಿಗಳು ನಾಶವಾಗಿದ್ದವು. ಆದರೆ, ಕಳೆದ ವರ್ಷದ ಅನುಭವದಿಂದ ಪಾಠ ಕಲಿತು ಈ ಬಾರಿ ತಂತ್ರಜ್ಞಾನ ಹಾಗೂ ಕಾಳಜಿಯಲ್ಲಿ ಸುಧಾರಣೆ ಮಾಡಿಕೊಂಡ ಪರಿಣಾಮ, ಈ ವರ್ಷ ಕೇವಲ ಶೇ.5 ರಷ್ಟು ಮಾತ್ರ ಸಸಿಗಳ ಡೆತ್ ರೇಟ್ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಇದನ್ನೂ ಸಂಪೂರ್ಣವಾಗಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಬೀದರ್ ಜಿಲ್ಲೆಯ ವಾತಾವರಣ, ಮಣ್ಣು ಮತ್ತು ನೀರು ಸ್ಟ್ರಾಬೆರಿ ಬೆಳೆಗೆ ಅತ್ಯಂತ ಸೂಕ್ತವಾಗಿದೆ. 15 ರಿಂದ 30 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಇರಬೇಕು. ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರವರೆಗೆ ಪ್ಲಾಂಟೇಷನ್ ಮಾಡಲು ಸೂಕ್ತ ಸಮಯವಾಗಿದ್ದು, ಚಳಿಗಾಲ ಆರಂಭಕ್ಕೂ ಮುನ್ನ ಸಸಿಗಳನ್ನು ನೆಟ್ಟರೆ ಉತ್ತಮ ಫಲ ದೊರೆಯುತ್ತದೆ ಎಂದು ವೈಜಿನಾಥ್ ನಿಡೋದಾ ವಿವರಿಸುತ್ತಾರೆ. ಚಳಿಗಾಲದಲ್ಲಿ ಹೂ ಹಾಗೂ ಹಣ್ಣು ಬಿಡುವ ಪ್ರಮಾಣ ಹೆಚ್ಚಾಗುತ್ತದೆ. ಆದರೆ ಮಾರ್ಚ್ ತಿಂಗಳಲ್ಲಿ ಬೇಸಿಗೆ ಆರಂಭವಾದಂತೆ ಇಳುವರಿ ಕಡಿಮೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಯಶಸ್ಸಿನಿಂದ ಉತ್ತೇಜನಗೊಂಡ ಅವರು 2025ರಲ್ಲಿ 2 ಎಕರೆ ಜಮೀನಿನಲ್ಲಿ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡಿದ್ದಾರೆ. ಈಗಾಗಲೇ ಫಸಲು ಬರಲು ಆರಂಭವಾಗಿದ್ದು, ಪ್ರತಿದಿನ ಸುಮಾರು ₹15,000 ರಿಂದ ₹16,000 ಆದಾಯ ಗಳಿಸುತ್ತಿದ್ದಾರೆ. ಉತ್ತರ ಕರ್ನಾಟಕದ ರೈತರಿಗೆ ಸ್ಟ್ರಾಬೆರಿ ಕೃಷಿ ಹೊಸ ಆರ್ಥಿಕ ಪರ್ಯಾಯವಾಗಿ ಮೂಡಿಬರುತ್ತಿದೆ.

(ಡಿಜಿಟಲ್‌ ಸೋರ್ಸ್)

ಇದನ್ನೂ ಓದಿ…

ಓದುಗರ ಅಭಿಪ್ರಾಯಕ್ಕೆ 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

23 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago