Advertisement
ಸುದ್ದಿಗಳು

‘ಇಲ್ಲಿ ಆಗಲ್ಲ’ ಅನ್ನೋದನ್ನು ಮುರಿದ ರೈತ – ಬಿಸಿಲು ನಾಡಿನ ಸ್ಟ್ರಾಬೆರಿ ಕಥೆ

Share

ಶೀತ ಪ್ರದೇಶಗಳಲ್ಲಿ ಮಾತ್ರ ಸ್ಟ್ರಾಬೆರಿ ಬೆಳೆಯಲು ಸಾಧ್ಯ ಎಂಬ ಸಾಮಾನ್ಯ ನಂಬಿಕೆ ಇದೆ. ಇದಕ್ಕೆ ಅಪವಾದವಾಗಿ ಬಿಸಿಲನಾಡು ಉತ್ತರ ಕರ್ನಾಟಕದಲ್ಲೂ ಸ್ಟ್ರಾಬೆರಿ ಕೃಷಿ ಯಶಸ್ವಿಯಾಗಬಹುದು ಎಂಬುದನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿಡೋದಾ ಗ್ರಾಮದ ರೈತ ವೈಜಿನಾಥ್ ನಿಡೋದಾ ಅವರು ಪ್ರಾಯೋಗಿಕವಾಗಿ ಸಾಬೀತುಪಡಿಸಿದ್ದಾರೆ.

2024ರಲ್ಲಿ ಅರ್ಧ ಎಕರೆ ಭೂಮಿಯಲ್ಲಿ 10 ಸಾವಿರ ಸ್ಟ್ರಾಬೆರಿ ಸಸಿಗಳನ್ನು ಪ್ಲಾಂಟೇಷನ್ ಮಾಡಿದ ಅವರು, ಮೊದಲ ಪ್ರಯತ್ನದಲ್ಲಿ ನಿರ್ವಹಣಾ ತಪ್ಪುಗಳಿಂದ ಸುಮಾರು 30 ಶೇಕಡಾ ಸಸಿಗಳು ನಾಶವಾಗಿದ್ದವು. ಆದರೆ, ಕಳೆದ ವರ್ಷದ ಅನುಭವದಿಂದ ಪಾಠ ಕಲಿತು ಈ ಬಾರಿ ತಂತ್ರಜ್ಞಾನ ಹಾಗೂ ಕಾಳಜಿಯಲ್ಲಿ ಸುಧಾರಣೆ ಮಾಡಿಕೊಂಡ ಪರಿಣಾಮ, ಈ ವರ್ಷ ಕೇವಲ ಶೇ.5 ರಷ್ಟು ಮಾತ್ರ ಸಸಿಗಳ ಡೆತ್ ರೇಟ್ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಇದನ್ನೂ ಸಂಪೂರ್ಣವಾಗಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಬೀದರ್ ಜಿಲ್ಲೆಯ ವಾತಾವರಣ, ಮಣ್ಣು ಮತ್ತು ನೀರು ಸ್ಟ್ರಾಬೆರಿ ಬೆಳೆಗೆ ಅತ್ಯಂತ ಸೂಕ್ತವಾಗಿದೆ. 15 ರಿಂದ 30 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಇರಬೇಕು. ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರವರೆಗೆ ಪ್ಲಾಂಟೇಷನ್ ಮಾಡಲು ಸೂಕ್ತ ಸಮಯವಾಗಿದ್ದು, ಚಳಿಗಾಲ ಆರಂಭಕ್ಕೂ ಮುನ್ನ ಸಸಿಗಳನ್ನು ನೆಟ್ಟರೆ ಉತ್ತಮ ಫಲ ದೊರೆಯುತ್ತದೆ ಎಂದು ವೈಜಿನಾಥ್ ನಿಡೋದಾ ವಿವರಿಸುತ್ತಾರೆ. ಚಳಿಗಾಲದಲ್ಲಿ ಹೂ ಹಾಗೂ ಹಣ್ಣು ಬಿಡುವ ಪ್ರಮಾಣ ಹೆಚ್ಚಾಗುತ್ತದೆ. ಆದರೆ ಮಾರ್ಚ್ ತಿಂಗಳಲ್ಲಿ ಬೇಸಿಗೆ ಆರಂಭವಾದಂತೆ ಇಳುವರಿ ಕಡಿಮೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಯಶಸ್ಸಿನಿಂದ ಉತ್ತೇಜನಗೊಂಡ ಅವರು 2025ರಲ್ಲಿ 2 ಎಕರೆ ಜಮೀನಿನಲ್ಲಿ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡಿದ್ದಾರೆ. ಈಗಾಗಲೇ ಫಸಲು ಬರಲು ಆರಂಭವಾಗಿದ್ದು, ಪ್ರತಿದಿನ ಸುಮಾರು ₹15,000 ರಿಂದ ₹16,000 ಆದಾಯ ಗಳಿಸುತ್ತಿದ್ದಾರೆ. ಉತ್ತರ ಕರ್ನಾಟಕದ ರೈತರಿಗೆ ಸ್ಟ್ರಾಬೆರಿ ಕೃಷಿ ಹೊಸ ಆರ್ಥಿಕ ಪರ್ಯಾಯವಾಗಿ ಮೂಡಿಬರುತ್ತಿದೆ.

(ಡಿಜಿಟಲ್‌ ಸೋರ್ಸ್)

ಇದನ್ನೂ ಓದಿ…

ಓದುಗರ ಅಭಿಪ್ರಾಯಕ್ಕೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

6 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

23 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago