Advertisement
ಸುದ್ದಿಗಳು

‘ಇಲ್ಲಿ ಆಗಲ್ಲ’ ಅನ್ನೋದನ್ನು ಮುರಿದ ರೈತ – ಬಿಸಿಲು ನಾಡಿನ ಸ್ಟ್ರಾಬೆರಿ ಕಥೆ

Share

ಶೀತ ಪ್ರದೇಶಗಳಲ್ಲಿ ಮಾತ್ರ ಸ್ಟ್ರಾಬೆರಿ ಬೆಳೆಯಲು ಸಾಧ್ಯ ಎಂಬ ಸಾಮಾನ್ಯ ನಂಬಿಕೆ ಇದೆ. ಇದಕ್ಕೆ ಅಪವಾದವಾಗಿ ಬಿಸಿಲನಾಡು ಉತ್ತರ ಕರ್ನಾಟಕದಲ್ಲೂ ಸ್ಟ್ರಾಬೆರಿ ಕೃಷಿ ಯಶಸ್ವಿಯಾಗಬಹುದು ಎಂಬುದನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿಡೋದಾ ಗ್ರಾಮದ ರೈತ ವೈಜಿನಾಥ್ ನಿಡೋದಾ ಅವರು ಪ್ರಾಯೋಗಿಕವಾಗಿ ಸಾಬೀತುಪಡಿಸಿದ್ದಾರೆ.

2024ರಲ್ಲಿ ಅರ್ಧ ಎಕರೆ ಭೂಮಿಯಲ್ಲಿ 10 ಸಾವಿರ ಸ್ಟ್ರಾಬೆರಿ ಸಸಿಗಳನ್ನು ಪ್ಲಾಂಟೇಷನ್ ಮಾಡಿದ ಅವರು, ಮೊದಲ ಪ್ರಯತ್ನದಲ್ಲಿ ನಿರ್ವಹಣಾ ತಪ್ಪುಗಳಿಂದ ಸುಮಾರು 30 ಶೇಕಡಾ ಸಸಿಗಳು ನಾಶವಾಗಿದ್ದವು. ಆದರೆ, ಕಳೆದ ವರ್ಷದ ಅನುಭವದಿಂದ ಪಾಠ ಕಲಿತು ಈ ಬಾರಿ ತಂತ್ರಜ್ಞಾನ ಹಾಗೂ ಕಾಳಜಿಯಲ್ಲಿ ಸುಧಾರಣೆ ಮಾಡಿಕೊಂಡ ಪರಿಣಾಮ, ಈ ವರ್ಷ ಕೇವಲ ಶೇ.5 ರಷ್ಟು ಮಾತ್ರ ಸಸಿಗಳ ಡೆತ್ ರೇಟ್ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಇದನ್ನೂ ಸಂಪೂರ್ಣವಾಗಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಬೀದರ್ ಜಿಲ್ಲೆಯ ವಾತಾವರಣ, ಮಣ್ಣು ಮತ್ತು ನೀರು ಸ್ಟ್ರಾಬೆರಿ ಬೆಳೆಗೆ ಅತ್ಯಂತ ಸೂಕ್ತವಾಗಿದೆ. 15 ರಿಂದ 30 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಇರಬೇಕು. ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರವರೆಗೆ ಪ್ಲಾಂಟೇಷನ್ ಮಾಡಲು ಸೂಕ್ತ ಸಮಯವಾಗಿದ್ದು, ಚಳಿಗಾಲ ಆರಂಭಕ್ಕೂ ಮುನ್ನ ಸಸಿಗಳನ್ನು ನೆಟ್ಟರೆ ಉತ್ತಮ ಫಲ ದೊರೆಯುತ್ತದೆ ಎಂದು ವೈಜಿನಾಥ್ ನಿಡೋದಾ ವಿವರಿಸುತ್ತಾರೆ. ಚಳಿಗಾಲದಲ್ಲಿ ಹೂ ಹಾಗೂ ಹಣ್ಣು ಬಿಡುವ ಪ್ರಮಾಣ ಹೆಚ್ಚಾಗುತ್ತದೆ. ಆದರೆ ಮಾರ್ಚ್ ತಿಂಗಳಲ್ಲಿ ಬೇಸಿಗೆ ಆರಂಭವಾದಂತೆ ಇಳುವರಿ ಕಡಿಮೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಯಶಸ್ಸಿನಿಂದ ಉತ್ತೇಜನಗೊಂಡ ಅವರು 2025ರಲ್ಲಿ 2 ಎಕರೆ ಜಮೀನಿನಲ್ಲಿ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡಿದ್ದಾರೆ. ಈಗಾಗಲೇ ಫಸಲು ಬರಲು ಆರಂಭವಾಗಿದ್ದು, ಪ್ರತಿದಿನ ಸುಮಾರು ₹15,000 ರಿಂದ ₹16,000 ಆದಾಯ ಗಳಿಸುತ್ತಿದ್ದಾರೆ. ಉತ್ತರ ಕರ್ನಾಟಕದ ರೈತರಿಗೆ ಸ್ಟ್ರಾಬೆರಿ ಕೃಷಿ ಹೊಸ ಆರ್ಥಿಕ ಪರ್ಯಾಯವಾಗಿ ಮೂಡಿಬರುತ್ತಿದೆ.

(ಡಿಜಿಟಲ್‌ ಸೋರ್ಸ್)

ಇದನ್ನೂ ಓದಿ…

ಓದುಗರ ಅಭಿಪ್ರಾಯಕ್ಕೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

2 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

2 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

13 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

14 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

20 hours ago