BIG BREAKING : ಸಂಸದೀಯ ಕಾರ್ಯದರ್ಶಿ ಎದುರಿನಲ್ಲೇ ಸ್ಫೋಟಗೊಂಡ ಕಾಂಗ್ರೆಸ್ ಭಿನ್ನಮತ- ಸಭೆ ಅರ್ಧಕ್ಕೆ ಮೊಟಕು

June 11, 2019
11:12 PM

ಸುಳ್ಯ: ವಿಧಾನ ಪರಿಷತ್ ಸದಸ್ಯ ಮತ್ತು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಎದುರಿನಲ್ಲೇ ಸುಳ್ಯದ ಕಾಂಗ್ರೆಸ್ ನ ಭಿನ್ನಮತ ಸ್ಪೋಟಗೊಂಡು ಕಾರ್ಯಕರ್ತರ ಸಭೆ ಅರ್ಧಕ್ಕೆ ಮೊಟಕುಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಖಾಸಗೀ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಸಭೆಗೆ ಐವನ್ ಆಗಮಿಸಿದ್ದರು. ನ.ಪಂ.ಚುನಾವಣೆಯಲ್ಲಿ ಬೂಡು ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದ ರಿಯಾಝ್ ಕಟ್ಟೆಕ್ಕಾರ್ ಕಾಂಗ್ರೆಸ್ ಸಭೆಗೆ ಆಗಮಿಸಿದ್ದು ಗದ್ದಲಕ್ಕೆ ಕಾರಣವಾಯಿತು. ರಿಯಾಝ್ ಸಭೆಯಲ್ಲಿ ಕುಳಿತಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯನ್ನು ಸೋಲಿಸಿ ಗೆದ್ದ ಪಕ್ಷೇತರ ಅಭ್ಯರ್ಥಿ ಕಾಂಗ್ರೆಸ್ ಸಭೆಗೆ ಆಗಮಿಸಿದ್ದು ಯಾಕೆ ಎಂದು ಕಾರ್ಯಕರ್ತರು ಪ್ರಶ್ನಿಸಿದರು. ಬಳಿಕ ಅವರನ್ನು ಹೊರ ಹೋಗಬೇಕು ಎಂದು ಕಾಂಗ್ರೆಸ್ ಮುಖಂಡರು ಸೂಚಿಸಿದರು ಎನ್ನಲಾಗಿದೆ. ಇದರಿಂದ ಆರಂಭಗೊಂಡ ಮಾತಿನ ಚಕಮಕಿ ತಾರಕಕ್ಕೇರಿತು. ಚರ್ಚೆಯ ಮಧ್ಯೆ ಕಾಂಗ್ರೆಸ್‌ ನಾಯಕರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಮತ್ತು ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ ಮಧ್ಯೆ ಹಾಗು ವೆಂಕಪ್ಪ ಗೌಡ ಮತ್ತು ಗೋಕುಲ್ ದಾಸ್ ಮಧ್ಯೆ ವಾಗ್ಯುದ್ಧವೇ ನಡೆಯಿತು. ನಾಯಕರ ಮಧ್ಯೆ ಮಾತಿನ ಚಕಮಕಿ ತಾರಕಕ್ಕೇರಿ ಸಭೆಯಲ್ಲಿ ತೀವ್ರ ಗದ್ದಲ ಗೊಂದಲ ಉಂಟಾಯಿತು ಎಂದು ತಿಳಿದು ಬಂದಿದೆ. ಈ ಸಂದರ್ಭ ಸಭೆ ಅರ್ಧಕ್ಕೆ ಮೊಟಕು ಗೊಂಡಿತು.

ಬಳಿಕ ನಾಯಕರನ್ನು ಸಮಾಧಾನ ಪಡಿಸಿ ಐವನ್ ಡಿಸೋಜ ಸಭೆಯಿಂದ ತೆರಳಿದರು. ಹಲವು ಸಮಯಗಳಿಂದ ಹೊಗೆಯಾಡುತ್ತಿದ್ದ ಕಾಂಗ್ರೆಸ್ ಒಳಗಿನ ಭಿನ್ನಮತ ಇಂದು ರಾಜ್ಯ ನಾಯಕರ ಎದುರಿನಲ್ಲೇ ಒಮ್ಮಿಂದೊಮ್ಮೆಲೆ ಸ್ಫೋಟಗೊಂಡಿತು ಎಂದು ಹೇಳಲಾಗುತಿದೆ.

ಇದಕ್ಕೂ ಮುನ್ನ ನ.ಪಂ.ಪಕ್ಷೇತರ ಸದಸ್ಯ ರಿಯಾಝ್ ಕಟ್ಟೆಕ್ಕಾರ್ ಐವನ್ ಡಿಸೋಜ ಅವರನ್ನು ತನ್ನ ವಾರ್ಡ್ ಗೆ ಕರೆದೊಯ್ಯಲು ಪ್ರಯತ್ನ ನಡೆಸಿದರು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಕಾರಣ ಐವನ್ ಡಿಸೋಜ ಹೋಗಲು ಒಪ್ಪಿರಲಿಲ್ಲ. ಬಳಿಕ ರಿಯಾಝ್ ಸಭೆಗೆ ಆಗಮಿಸಿದ್ದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು ಎನ್ನಲಾಗುತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror