Advertisement
Political mirror

BIG BREAKING : ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ರಾಜಿನಾಮೆ

Share

ಸುಳ್ಯ :ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಎನ್.ಜಯಪ್ರಕಾಶ್ ರೈ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Advertisement
Advertisement

ನಗರ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರ ಬಂದ ಬಳಿಕ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಮೂಲಕ ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ‌‌. ರಾಜಿನಾಮೆ ನೀಡಿರುವುದನ್ನು ಜಯಪ್ರಕಾಶ್ ರೈ ಸುಳ್ಯ ನ್ಯೂಸ್.ಕಾಂ ಗೆ ಖಚಿತಪಡಿಸಿದ್ದಾರೆ.

Advertisement

ವಿದೇಶ ಪ್ರವಾಸ ಕೈಗೊಳ್ಳುವುದರಿಂದ ಮೂರು ತಿಂಗಳ ಕಾಲ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಕಾರಣ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಜಯಪ್ರಕಾಶ್ ರೈ ಹೇಳಿದ್ದಾರೆ. ನಗರ ಪಂಚಾಯತ್ ಚುನಾವಣಾ ಸೋಲಿನ ಹೊಣೆ ಹೊತ್ತು ರಾಜಿನಾಮೆ ನೀಡಿಲ್ಲ. ವೈಯುಕ್ತಿಕ ಕಾರಣಗಳಿಂದ ರಾಜಿನಾಮೆ ನೀಡಿದ್ದೇನೆ. ಚುನಾವಣಾ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವುದಾದರೆ ಅಧ್ಯಕ್ಷರು ಒಬ್ಬರೆ ರಾಜಿನಾಮೆ ನೀಡುವುದಲ್ಲ ಎಲ್ಲರೂ ತಮ್ಮ  ಸ್ಥಾನಗಳಿಗೆ ರಾಜಿನಾಮೆ ನೀಡಬೇಕಾಗುತ್ತದೆ. ಸೋಲಿಗೆ ಎಲ್ಲರೂ ಹೊಣೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಆಂತರಿಕ ಸಮಸ್ಯೆ ಕಾರಣವೇ.?

Advertisement

ವಿದೇಶ ಪ್ರವಾಸದ ಕಾರಣ ನೀಡಿ ಜಯಪ್ರಕಾಶ್ ರೈ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರೂ ಪಕ್ಷದಲ್ಲಿನ ಕೆಲವೊಂದು ಆಂತರಿಕ ಸಮಸ್ಯೆಯೂ ರಾಜಿನಾಮೆ ಸಲ್ಲಿಸಲು ಕಾರಣವಾಗಿದೆ ಎಂದು ಹೇಳಲಾಗಿದೆ. ನಗರ ಪಂಚಾಯತ್ ಚುನಾವಣೆಯಲ್ಲಿ ಎಂಟರಿಂದ ಹತ್ತು ಸ್ಥಾನಗಳವರೆಗೆ ಗೆಲ್ಲುವ ವಿಶ್ವಾಸ ಇದ್ದರೂ ಸೀಟ್ ಹಂಚಿಕೆಯಲ್ಲಿನ ಅಸಮಾಧಾನ, ಆಂತರಿಕ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಗೆ ಕೇವಲ ನಾಲ್ಕು ಸೀಟ್ ಮಾತ್ರ ಗೆಲ್ಲಲು ಸಾಧ್ಯವಾಗಿದೆ.

ಜಯಪ್ರಕಾಶ್ ರೈ ಅಧ್ಯಕ್ಷರಾದ ಬಳಿಕ ಸುಳ್ಯ ಕಾಂಗ್ರೆಸ್ ಗೆ ಚೈತನ್ಯ ತುಂಬುವ ಪ್ರಯತ್ನವನ್ನು ನಿರಂತರ ನಡೆಸುತ್ತಾ ಬಂದರೂ ಪಕ್ಷವನ್ನು ಚುನಾವಣಾ ಗೆಲುವಿನ ಹಾದಿಗೆ ತರಲು ಸಾಧ್ಯವಾಗಿಲ್ಲ. ಇದಕ್ಕೆ ಕೆಲವು ನಾಯಕರ ಅಸಹಕಾರವೂ ಕಾರಣ ಎಂದು ಹೇಳಲಾಗುತ್ತಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 hour ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

11 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago