Advertisement
Political mirror

BIG BREAKING : ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ರಾಜಿನಾಮೆ

Share

ಸುಳ್ಯ :ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಎನ್.ಜಯಪ್ರಕಾಶ್ ರೈ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ನಗರ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರ ಬಂದ ಬಳಿಕ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಮೂಲಕ ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ‌‌. ರಾಜಿನಾಮೆ ನೀಡಿರುವುದನ್ನು ಜಯಪ್ರಕಾಶ್ ರೈ ಸುಳ್ಯ ನ್ಯೂಸ್.ಕಾಂ ಗೆ ಖಚಿತಪಡಿಸಿದ್ದಾರೆ.

ವಿದೇಶ ಪ್ರವಾಸ ಕೈಗೊಳ್ಳುವುದರಿಂದ ಮೂರು ತಿಂಗಳ ಕಾಲ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಕಾರಣ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಜಯಪ್ರಕಾಶ್ ರೈ ಹೇಳಿದ್ದಾರೆ. ನಗರ ಪಂಚಾಯತ್ ಚುನಾವಣಾ ಸೋಲಿನ ಹೊಣೆ ಹೊತ್ತು ರಾಜಿನಾಮೆ ನೀಡಿಲ್ಲ. ವೈಯುಕ್ತಿಕ ಕಾರಣಗಳಿಂದ ರಾಜಿನಾಮೆ ನೀಡಿದ್ದೇನೆ. ಚುನಾವಣಾ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವುದಾದರೆ ಅಧ್ಯಕ್ಷರು ಒಬ್ಬರೆ ರಾಜಿನಾಮೆ ನೀಡುವುದಲ್ಲ ಎಲ್ಲರೂ ತಮ್ಮ  ಸ್ಥಾನಗಳಿಗೆ ರಾಜಿನಾಮೆ ನೀಡಬೇಕಾಗುತ್ತದೆ. ಸೋಲಿಗೆ ಎಲ್ಲರೂ ಹೊಣೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಆಂತರಿಕ ಸಮಸ್ಯೆ ಕಾರಣವೇ.?

ವಿದೇಶ ಪ್ರವಾಸದ ಕಾರಣ ನೀಡಿ ಜಯಪ್ರಕಾಶ್ ರೈ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರೂ ಪಕ್ಷದಲ್ಲಿನ ಕೆಲವೊಂದು ಆಂತರಿಕ ಸಮಸ್ಯೆಯೂ ರಾಜಿನಾಮೆ ಸಲ್ಲಿಸಲು ಕಾರಣವಾಗಿದೆ ಎಂದು ಹೇಳಲಾಗಿದೆ. ನಗರ ಪಂಚಾಯತ್ ಚುನಾವಣೆಯಲ್ಲಿ ಎಂಟರಿಂದ ಹತ್ತು ಸ್ಥಾನಗಳವರೆಗೆ ಗೆಲ್ಲುವ ವಿಶ್ವಾಸ ಇದ್ದರೂ ಸೀಟ್ ಹಂಚಿಕೆಯಲ್ಲಿನ ಅಸಮಾಧಾನ, ಆಂತರಿಕ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಗೆ ಕೇವಲ ನಾಲ್ಕು ಸೀಟ್ ಮಾತ್ರ ಗೆಲ್ಲಲು ಸಾಧ್ಯವಾಗಿದೆ.

ಜಯಪ್ರಕಾಶ್ ರೈ ಅಧ್ಯಕ್ಷರಾದ ಬಳಿಕ ಸುಳ್ಯ ಕಾಂಗ್ರೆಸ್ ಗೆ ಚೈತನ್ಯ ತುಂಬುವ ಪ್ರಯತ್ನವನ್ನು ನಿರಂತರ ನಡೆಸುತ್ತಾ ಬಂದರೂ ಪಕ್ಷವನ್ನು ಚುನಾವಣಾ ಗೆಲುವಿನ ಹಾದಿಗೆ ತರಲು ಸಾಧ್ಯವಾಗಿಲ್ಲ. ಇದಕ್ಕೆ ಕೆಲವು ನಾಯಕರ ಅಸಹಕಾರವೂ ಕಾರಣ ಎಂದು ಹೇಳಲಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

4 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

6 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

10 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

17 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago