Advertisement
Political mirror

BIG BREAKING : ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ರಾಜಿನಾಮೆ

Share

ಸುಳ್ಯ :ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಎನ್.ಜಯಪ್ರಕಾಶ್ ರೈ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ನಗರ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರ ಬಂದ ಬಳಿಕ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಮೂಲಕ ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ‌‌. ರಾಜಿನಾಮೆ ನೀಡಿರುವುದನ್ನು ಜಯಪ್ರಕಾಶ್ ರೈ ಸುಳ್ಯ ನ್ಯೂಸ್.ಕಾಂ ಗೆ ಖಚಿತಪಡಿಸಿದ್ದಾರೆ.

ವಿದೇಶ ಪ್ರವಾಸ ಕೈಗೊಳ್ಳುವುದರಿಂದ ಮೂರು ತಿಂಗಳ ಕಾಲ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಕಾರಣ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಜಯಪ್ರಕಾಶ್ ರೈ ಹೇಳಿದ್ದಾರೆ. ನಗರ ಪಂಚಾಯತ್ ಚುನಾವಣಾ ಸೋಲಿನ ಹೊಣೆ ಹೊತ್ತು ರಾಜಿನಾಮೆ ನೀಡಿಲ್ಲ. ವೈಯುಕ್ತಿಕ ಕಾರಣಗಳಿಂದ ರಾಜಿನಾಮೆ ನೀಡಿದ್ದೇನೆ. ಚುನಾವಣಾ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವುದಾದರೆ ಅಧ್ಯಕ್ಷರು ಒಬ್ಬರೆ ರಾಜಿನಾಮೆ ನೀಡುವುದಲ್ಲ ಎಲ್ಲರೂ ತಮ್ಮ  ಸ್ಥಾನಗಳಿಗೆ ರಾಜಿನಾಮೆ ನೀಡಬೇಕಾಗುತ್ತದೆ. ಸೋಲಿಗೆ ಎಲ್ಲರೂ ಹೊಣೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಆಂತರಿಕ ಸಮಸ್ಯೆ ಕಾರಣವೇ.?

ವಿದೇಶ ಪ್ರವಾಸದ ಕಾರಣ ನೀಡಿ ಜಯಪ್ರಕಾಶ್ ರೈ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರೂ ಪಕ್ಷದಲ್ಲಿನ ಕೆಲವೊಂದು ಆಂತರಿಕ ಸಮಸ್ಯೆಯೂ ರಾಜಿನಾಮೆ ಸಲ್ಲಿಸಲು ಕಾರಣವಾಗಿದೆ ಎಂದು ಹೇಳಲಾಗಿದೆ. ನಗರ ಪಂಚಾಯತ್ ಚುನಾವಣೆಯಲ್ಲಿ ಎಂಟರಿಂದ ಹತ್ತು ಸ್ಥಾನಗಳವರೆಗೆ ಗೆಲ್ಲುವ ವಿಶ್ವಾಸ ಇದ್ದರೂ ಸೀಟ್ ಹಂಚಿಕೆಯಲ್ಲಿನ ಅಸಮಾಧಾನ, ಆಂತರಿಕ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಗೆ ಕೇವಲ ನಾಲ್ಕು ಸೀಟ್ ಮಾತ್ರ ಗೆಲ್ಲಲು ಸಾಧ್ಯವಾಗಿದೆ.

ಜಯಪ್ರಕಾಶ್ ರೈ ಅಧ್ಯಕ್ಷರಾದ ಬಳಿಕ ಸುಳ್ಯ ಕಾಂಗ್ರೆಸ್ ಗೆ ಚೈತನ್ಯ ತುಂಬುವ ಪ್ರಯತ್ನವನ್ನು ನಿರಂತರ ನಡೆಸುತ್ತಾ ಬಂದರೂ ಪಕ್ಷವನ್ನು ಚುನಾವಣಾ ಗೆಲುವಿನ ಹಾದಿಗೆ ತರಲು ಸಾಧ್ಯವಾಗಿಲ್ಲ. ಇದಕ್ಕೆ ಕೆಲವು ನಾಯಕರ ಅಸಹಕಾರವೂ ಕಾರಣ ಎಂದು ಹೇಳಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

4 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

4 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

4 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

11 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

12 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

12 hours ago