ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ ಕಬ್ಬಿಣದ ಸೇತುವೆ ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!. ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ ಪರಾರಿಯಾಗಿದೆ.
ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.
ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…