ವೈರಲ್ ಸುದ್ದಿ

ಹಗಲು ಹೊತ್ತಿನಲ್ಲೇ 60 ಅಡಿ ಉದ್ದದ ಸೇತುವೆಯನ್ನು ಕದ್ದ ಕಳ್ಳರು….!

Share

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ  ಕಬ್ಬಿಣದ ಸೇತುವೆ  ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!.  ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ  ಪರಾರಿಯಾಗಿದೆ.

ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ  ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.

ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

6 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

7 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

21 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

21 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

22 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

22 hours ago