ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ ಕಬ್ಬಿಣದ ಸೇತುವೆ ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!. ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ ಪರಾರಿಯಾಗಿದೆ.
ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.
ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…