ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ ಕಬ್ಬಿಣದ ಸೇತುವೆ ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!. ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ ಪರಾರಿಯಾಗಿದೆ.
ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.
ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…