ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ ಕಬ್ಬಿಣದ ಸೇತುವೆ ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!. ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ ಪರಾರಿಯಾಗಿದೆ.
ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.
ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…