ನಿವೃತ್ತ ಸೇನಾ ಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ. ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್ ತಮ್ಮ ತಂದೆಯ ಜೊತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು.
ಮಂಡ್ಯದ ಹೊರ ವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದರು. ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಕ್ಕೆ ಬಿದ್ದ ಯೋಧನ ಮೇಲೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಹರಿದಿದೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಾರ್ ಪರೀಕ್ಷೆಯೊಂದನ್ನು ಬರೆಯುವ ಸಲುವಾಗಿ ಊರಿಗೆ ಬಂದಿದ್ದರು. ನಿನ್ನೆ ಸಂಜೆ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…