ನಿವೃತ್ತ ಸೇನಾ ಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ. ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್ ತಮ್ಮ ತಂದೆಯ ಜೊತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು.
ಮಂಡ್ಯದ ಹೊರ ವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದರು. ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಕ್ಕೆ ಬಿದ್ದ ಯೋಧನ ಮೇಲೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಹರಿದಿದೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಾರ್ ಪರೀಕ್ಷೆಯೊಂದನ್ನು ಬರೆಯುವ ಸಲುವಾಗಿ ಊರಿಗೆ ಬಂದಿದ್ದರು. ನಿನ್ನೆ ಸಂಜೆ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…