ನಿವೃತ್ತ ಸೇನಾ ಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ. ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್ ತಮ್ಮ ತಂದೆಯ ಜೊತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು.
ಮಂಡ್ಯದ ಹೊರ ವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದರು. ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಕ್ಕೆ ಬಿದ್ದ ಯೋಧನ ಮೇಲೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಹರಿದಿದೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಾರ್ ಪರೀಕ್ಷೆಯೊಂದನ್ನು ಬರೆಯುವ ಸಲುವಾಗಿ ಊರಿಗೆ ಬಂದಿದ್ದರು. ನಿನ್ನೆ ಸಂಜೆ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…