ನಿವೃತ್ತ ಸೇನಾ ಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ. ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್ ತಮ್ಮ ತಂದೆಯ ಜೊತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು.
ಮಂಡ್ಯದ ಹೊರ ವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದರು. ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಕ್ಕೆ ಬಿದ್ದ ಯೋಧನ ಮೇಲೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಹರಿದಿದೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಾರ್ ಪರೀಕ್ಷೆಯೊಂದನ್ನು ಬರೆಯುವ ಸಲುವಾಗಿ ಊರಿಗೆ ಬಂದಿದ್ದರು. ನಿನ್ನೆ ಸಂಜೆ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…