ನಿವೃತ್ತ ಸೇನಾ ಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ. ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್ ತಮ್ಮ ತಂದೆಯ ಜೊತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು.
ಮಂಡ್ಯದ ಹೊರ ವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದರು. ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಕ್ಕೆ ಬಿದ್ದ ಯೋಧನ ಮೇಲೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಹರಿದಿದೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಾರ್ ಪರೀಕ್ಷೆಯೊಂದನ್ನು ಬರೆಯುವ ಸಲುವಾಗಿ ಊರಿಗೆ ಬಂದಿದ್ದರು. ನಿನ್ನೆ ಸಂಜೆ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…