Advertisement
MIRROR FOCUS

ಬಿಳಿನೆಲೆಯ ಭಾಗ್ಯ ಹೊಳೆಗೆ ಸಂಪರ್ಕ ಸೇತುವೆ | ಹಲವು ವರ್ಷಗಳ ಜನರ ಬೇಡಿಕೆಗೆ ಸಿಕ್ಕಿತು ಗೆಲುವು |

Share

ಹಲವು ವಷಗಳಿಂದ ಇಲ್ಲಿನ ಜನರು ಸಂಕಷ್ಟ ಪಡುತ್ತಿದ್ದು, ಮಳೆಗಾಲ ಬಂತೆಂದರೆ ಹೊಳೆ ದಾಟಲಾಗದೆ ಸಂಪರ್ಕವೇ ಕಷ್ಟವಾಗಿತ್ತು. ಅಂತಹ ಸಂಕಷ್ಟದ ಪರಿಸ್ಥಿತಿ ಬಿಳಿನೆಲೆ ಗ್ರಾಮದ ಉದ್ಮಯ ಎಂಬಲ್ಲಿ ಕಂಡುಬಂದಿತ್ತು. ಹೀಗಾಗಿ ಈ ಭಾಗದ ಪುತ್ತಿಲ, ಬೈಲಡ್ಕ ಮೊದಲಾದ ಪ್ರದೇಶದ ಜನರಿಗೆ ಸಂಕಷ್ಟವಾಗಿತ್ತು. ಇದೀಗ ಸುಳ್ಯ ಶಾಸಕ, ಸಚಿವ ಎಸ್ ಅಂಗಾರ ಅವರ ಶಿಫಾರಿಸ್ಸಿನ ಮೇರೆಗೆ ಶಾಲಾ ಸಂಪರ್ಕ ಸೇತುವೆ ಯೋಜನೆಯಡಿಯಲ್ಲಿ ಸೇತುವೆ ನಿರ್ಮಾಣವಾಗಲಿದೆ. ಹಲವು ವರ್ಷಗಳಿಂದ ಜನರು ಸಲ್ಲಿಸುತ್ತಿದ್ದ ಬೇಡಿಕೆಗೆ ಈಗ ಈಡೇರಿದೆ, ಸ್ಥಳೀಯ ಜನಪ್ರತಿನಿಧಿಗಳೂ ಇದಕ್ಕಾಗಿ ಸತತ ಪ್ರಯತ್ನ ಮಾಡಿದ್ದರು.

 

 

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಹರಿಯುವ ಭಾಗ್ಯ ಹೊಳೆಗೆ ಉದ್ಮಯ ಎಂಬಲ್ಲಿ ಶಾಲಾ ಸಂಪರ್ಕ ಸೇತು ಯೋಜನೆಯಡಿಯಲ್ಲಿ ಸುಸಜ್ಜಿತ ಸೇತುವೆ ನಿರ್ಮಾಣವಾಗಲಿದೆ. ಮುಂದಿನ ಎರಡು ತಿಂಗಳಲ್ಲಿ ಸೇತುವೆ ನಿರ್ಮಾಣವಾಗಿ ಲೋಕಾರ್ಪಣೆಯಾಗಲಿದೆ. ಆ ಮೂಲಕ ಹಲವು ವರ್ಷಗಳ ಈ ಭಾಗದ ಜನರ ಬೇಡಿಕೆ ಈಡೇರುತ್ತಿದೆ. ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಸೇತುವೆ ಮಳೆಗಾಲದ ಮುನ್ನವೇ ರಚನೆಯಾಗಬೇಕು ಎನ್ನುವ ನೆಲೆಯಲ್ಲಿ  ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.

 

 

ಮಳೆಗಾಲದಲ್ಲಿ ಇಲ್ಲಿನ ಪುತ್ತಿಲ ಬೈಲಡ್ಕ ಭಾಗದ ಜನರಿಗೆ ಸಂಕಷ್ಟ, ಭಾಗ್ಯ ಹೊಳೆಯಲ್ಲಿ ನೀರು ತುಂಬಿ ಹರಿಯುವ ಕಾರಣ  ಸೇತುವೆಯಿಲ್ಲದೆ ದಾಟುವುದೇ ಸಾಹಸದ ಕೆಲಸವಾಗಿತ್ತು. ಹೀಗಾಗಿ ಮಳೆಗಾಲದಲ್ಲಿ ಹೊಳೆಯನ್ನು ದಾಟಲು ಸ್ಥಳಿಯರೇ ಕಾಲು ಸಂಕ ನಿರ್ಮಿಸುತ್ತಿದ್ದರು, ಅದುವೇ ಆಧಾರವಾಗಿತ್ತು, ಶಾಲಾ ಮಕ್ಕಳಿಗಂತೂ ಭಾರೀ ಮಳೆ ಇದ್ದರೆ ಹೊಳೆ ದಾಟಿ ಸಾಗಲು ಭಯದ ವಾತಾವರಣ ಇತ್ತು.  ಹೀಗಾಗಿ ಇಲ್ಲೊಂದು ಸರ್ವಋತು ಸೇತುವೆಯಾಗಬೇಕು ಎಂದು ಈ ಭಾಗದ ಜನತೆ ಜನಪ್ರತಿನಿಧಿಗಳಲ್ಲಿ ನಿರಂತರವಾಗಿ ಹೇಳುತ್ತಲೇ ಇದ್ದರು. ವಿವಿಧ ಮಾಧ್ಯಮಗಳು ಕೂಡಾ ಗಮನ ಸೆಳೆದಿದ್ದವು. ಇದೀಗ ಸುಳ್ಯ ಶಾಸಕ, ಸಚಿವ ಎಸ್ ಅಂಗಾರ ಅವರ ಶಿಫಾರಿಸ್ಸಿನ ಮೇರೆಗೆ ಶಾಲಾ ಸಂಪರ್ಕ ಸೇತುವೆ ಯೋಜನೆಯಡಿಯಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದರ ಹಿಂದೆ ಸ್ಥಳೀಯ ಜನಪ್ರತಿನಿಧಿಗಳೂ ಕೆಲಸ ಮಾಡಿದ್ದರು.

ಹೀಗಿತ್ತು ಇಲ್ಲಿನ ಪರಿಸ್ಥಿತಿ...
ಬಿಳಿನೆಲೆಯ ಪುತ್ತಿಲ ಬೈಲಡ್ಕ ಭಾಗದಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬದ ಜನರು , ಶಾಲಾ ವಿದ್ಯಾರ್ಥಿಗಳು ಸೇತುವೆಯಿಲ್ಲದೆ ಮಳೆಗಾಲದಲ್ಲಿ ಈ ಅಪಾಯಕಾರಿಯಾಗಿ ಹೊಳೆ ದಾಟುತ್ತಿದ್ದರು. ಇಲ್ಲಿನ ಅರ್ಗಿನಿ, ಅಮೈ, ಬೈಲು ಪ್ರದೇಶದ ಜನತೆ ಬಿಳಿನೆಲೆ ಮುಖಾಂತರ ಕಡಬ ಸುಬ್ರಹ್ಮಣ್ಯ ಮತ್ತಿತರ ಪ್ರಮುಖ ಪೇಟೆ ಸಂಪರ್ಕಿಸಬೇಕಾದರೆ ಈ ಹೊಳೆಯನ್ನು ದಾಟಿ ಮುಂದುವರಿಯಬೇಕು. ಇದಕ್ಕಾಗಿ ಸ್ಥಳೀಯರೇ ಸ್ವತಃ ಖರ್ಚು ಮಾಡಿ ಕಾಲುಸಂಕ ರಚನೆ ಮಾಡುತ್ತಿದ್ದರು. ಕಬ್ಬಿಣದ ರಾಡ್ ಉಪಯೋಗಿಸಿ ನಿರ್ಮಿಸಿರುವ ಈ ಕಾಲು ಸಂಕದಲ್ಲಿ ಪ್ರಯಾಣಿಸುವುದೆ ಸಾಹಸವಾಗಿತ್ತು. ಇದೀಗ ಈ ಎಲ್ಲಾ ಸಾಹಸಗಳಿಗೆ ವಿರಾಮ ಸಿಕ್ಕಂತಾಗಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

31 minutes ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 hour ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

9 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

11 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

17 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

17 hours ago