ಧಾರ್ಮಿಕ

ಬಿಳಿನೆಲೆ : ವರ್ಷಾವಧಿ ಜಾತ್ರೋತ್ಸವ ಸಂಭ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ವರ್ಷಾವಧಿ ಜಾತ್ರೋತ್ಸವ ಮತ್ತು ನಿಶಿ ಪೂರ್ಣ ಭಜನೆ ಇದೀಗ ಕಳೆಗಟ್ಟಿದೆ.
ಫೆಬ್ರವರಿ 9 ರಂದು ಜಾತ್ರೋತ್ಸವದ ಮಹತ್ವದ ದಿನವಾಗಿದೆ. ಬ್ರಹ್ಮಶ್ರೀ ಉಚ್ಚಿಲ ಕೆ.ಯು. ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿದೆ.

Advertisement
Advertisement

ಬೆಳಿಗ್ಗೆ 6 ರಿಂದ ಗಣಪತಿ ಹವನ, ಕಲಶ ಪೂಜೆ, ಮಧ್ಯಾಹ್ನ ಕಲಶಾಭಿಷೇಕ, ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ, ಸಂಜೆ 6 ಗಂಟೆಯಿಂದ ದೀಪಾರಾಧನೆ, ಸಂಧ್ಯಾವಂದನೆ ನಡೆಯಲಿದೆ.

ಸಂಜೆ 6.15 ರಿಂದ ಕರ್ನಾಟಕ ಸಂಗೀತ ಕಛೇರಿ ಏರ್ಪಡಿಸಲಾಗಿದೆ. ವಿದ್ವಾನ್ ಮುರಳಿ ಕೃಷ್ಣ ಕಾವು ಪಟ್ಟಾಜೆ (ಗಾಯನ), ಮಾಸ್ಟರ್ ಸುಮೇಧ ಕನ್ಯಾನ ಅಮೈ (ವಯಲಿನ್), ವಿದ್ವಾನ್ ಸುನಾದಕೃಷ್ಣ ಕನ್ಯಾನ ಅಮೈ (ಮೃದಂಗ), ಶಿವಕೀರ್ತನ ಬಿ.ಜಿ. ಮತ್ತು ಮಾನಸ ಎನ್.ಎಸ್. ಪ್ರಾಯೋಜಕತ್ವ ವಹಿಸುವರು. ಸುಬ್ರಹ್ಮಣ್ಯ ಬಿಳಿನೆಲೆ ಡಾ. ವಿದ್ಯಾಭೂಷಣ ಅಭಿಮಾನಿ ಸಂಘದವರ ಸಹಕರಿಸುವರು. ರಾತ್ರಿ 9ರಿಂದ ಮಹಾಪೂಜೆ, ರಾತ್ರಿ 10 ರಿಂದ ರಾಜಾಂಗಣದಲ್ಲಿ ಶ್ರೀ ದೇವರ ಬಲಿ ನೃತ್ಯೋತ್ಸವ, ಬಟ್ಟಲು ಕಾಣಿಕೆ, ಮಹಾಪ್ರಸಾದ, ಮಹಾ ಮಂತ್ರಾಕ್ಷತೆ, ರಾತ್ರಿ 11 ಕ್ಕೆ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ಪುತ್ತೂರು ಎಸ್.ಆರ್.ಕೆ. ಲ್ಯಾಡರ್ ನ ಕೇಶವ ಎ. ಪ್ರಾಯೋಜಕತ್ವ ವಹಿಸುವರು.

ಬಿಳಿನೆಲೆ ಕ್ಷೇತ್ರ ಪರಮ ಪವಿತ್ರ ಕ್ಷೇತ್ರ ಎಂದರೆ ತಪ್ಪಲ್ಲ. ಸಾವಿರಾರು ವರ್ಷಗಳ ಹಿಂದೆ ಮುನಿಯೊಬ್ಬರು ತಪಸ್ಸು ಮಾಡಿ ಸಿದ್ಧಿ ಪಡೆದ ಪವಿತ್ರ ಭೂಮಿ. ಎರಡು ಕೈಗಳಲ್ಲಿ ಬೆಣ್ಣೆ ಹಿಡಿದ ನವನೀತ ದಾರಿ ಕೃಷ್ಣನ ಪ್ರತಿಮೆ ಬಹಳ ಅಪರೂಪ. ಗೋಸಂರಕ್ಷಕನಾದ ಗೋಪಾಲಕೃಷ್ಣನ ಈ ಕ್ಷೇತ್ರ ಗೋದುರಿತ ದೋಷ ನಿವಾರಣೆಗೆ ಪ್ರಸಿದ್ಧಿ ಪಡೆದಿದೆ.

 

Advertisement

ಭವ್ಯ ಹಿನ್ನಲೆಯ ಸುಕ್ಷೇತ್ರವಿದು :
ಗೋ ದುರಿತ ದೋಷ ನಿವಾರಣೆಗಾಗಿ, ಶಿಶುಹತ್ಯಾ ದೋಷ ನಿವಾರಣೆಗಾಗಿ ಹಾಗೂ ಇಷ್ಟಾರ್ಥ ಈಡೇರಿಸಲು ಈಗಾಗಲೇ ನಾಡಿನಾದ್ಯಂತ ಖ್ಯಾತಿಯನ್ನು ಪಡೆದ ಕ್ಷೇತ್ರವೇ ಬಿಳಿನೆಲೆ ಕ್ಷೇತ್ರ. ಇಲ್ಲಿಯ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಈ ಗ್ರಾಮ ಅಲ್ಲದೆ ದೂರದ ಊರುಗಳಿಂದ ಭಕ್ತರು ಬರುತ್ತಿದ್ದು ಸೇವೆಗಳನ್ನು ಮಾಡಿಸುತ್ತಿದ್ದಾರೆ. ಸುಮಾರು 800 ವರ್ಷಗಳ ಹಿಂದಿನದ್ದಾಗಿದ್ದು ತಪಸ್ವಿಯೋರ್ವರಿಂದ ಪ್ರತಿಷ್ಠೆಗೊಂಡಿದ್ದ ದೇವಸ್ಥಾನ ಎನ್ನುವುದು ಪ್ರತೀತಿ. ಹಿಂದೆ ವೈಭವದಿಂದ ಜಾತ್ರಾದಿಗಳನ್ನು ನಡೆಸುತ್ತಿದ್ದ ದೇವಾಲಯ ಕಾರಣಾಂತರಗಳಿಂದ ಪಾಳುಬಿದ್ದಿತ್ತು. ಆದರೆ ಇದೀಗ ಕಾಲಕಾಲಕ್ಕೆ ಜೀರ್ಣೋದ್ಧಾರಗೊಂಡು, ಬ್ರಹ್ಮಕಲಶೋತ್ಸವ ನೆರವೇರಲ್ಪಟ್ಟು ಮತ್ತೆ ಗತವೈಭವದತ್ತ ಸಾಗುತ್ತಿದೆ ಈ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ.

ಬಿಳಿನೆಲೆ ಒಂದು ಕುಗ್ರಾಮ. ಆದರೆ ಗೋಪಾಲಕೃಷ್ಣ ದೇವರ ಸನ್ನಿಧಿಯಿಂದಾಗಿ ಅದು ಸುಗ್ರಾಮವಾಗಿದೆ. ಪ್ರಾಚೀನ ದೇವಾಲಯಗಳಲ್ಲಿ ಒಂದಾದ ಈ ದೇವಳದಲ್ಲಿ ಸುಂದರವಾದ ಬಾಲಕೃಷ್ಣ ನಿತ್ಯ ಪೂಜೆಗೊಳ್ಳುತ್ತಾನೆ. ಹಿಂದಿನ ಕಾಲದಲ್ಲಿ ಪ್ರಸಿದ್ಧವಾದ ಪುಣ್ಯಕ್ಷೇತ್ರವಾಗಿದ್ದು, ಪ್ರಕೃತಿಯ ಮಡಿಲಲ್ಲಿ ಭಕ್ತರು ಅವರ್ಣನೀಯವಾದ ಆನಂದವನ್ನು ಪಡೆದು ಪುನೀತರಾಗಲು ಯೋಗ್ಯವಾದ ಕ್ಷೇತ್ರವಾಗಿತ್ತು ಈ ಬಿಳಿನೆಲೆ.

ಬಿಳಿನೆಲೆ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ದಾರಿಯಲ್ಲಿ ಉಪ್ಪಿನಂಗಡಿಯಿಂದ ಸುಮಾರು 25 ಮೈಲು ದೂರದಲ್ಲಿದೆ. ಇಲ್ಲಿಂದ ಸುಬ್ರಹ್ಮಣ್ಯಕ್ಕೆ 7 ಮೈಲುಗಳಷ್ಟು ಅಂತರ. ಈ ಗ್ರಾಮ ಹಿಂದೆ ಕುಕ್ಕೆ ಪುರಕ್ಕೊಳಪಟ್ಟ ಪ್ರದೇಶವಾಗಿತ್ತು. ಹಿಂದೆ ಬಿಳಿನೆಲೆ ಪ್ರಸಿದ್ಧ ಕ್ಷೇತ್ರವಾಗಿತ್ತು ಎನ್ನುವುದಕ್ಕೆ ಅಲ್ಲಿ ಸಿಗುವ ಆಧಾರಗಳೇ ಸಾಕ್ಷಿಯಾಗಿವೆ.

5 ಮತ್ತು 6 ನೇ ಶತಮಾನದಲ್ಲಿ ಬಿಳಿನೆಲೆ ದೊಡ್ಡ ವಿದ್ಯಾ ಕೇಂದ್ರವಾಗಿತ್ತು. ಇಲ್ಲಿ ನೂರಾರು ಶಿಷ್ಯರು ಜ್ಞಾನಾರ್ಜನೆ ಮಾಡುವ ಗುರುಕುಲ ಇತ್ತೆಂದು ತಿಳಿದುಬರುತ್ತದೆ. ಬಿಳಿನೆಲೆಯಲ್ಲಿ ಹರಿಯುತ್ತಿರುವ ಹೊಳೆಯ ಹೆಸರು ಹಿಂದೆ ಶುಕ್ಲ ತೀರ್ಥ ಎಂಬ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಈ ಶುಕ್ಲತೀರ್ಥ ಸಮೀಪ ಗುರುಗಳು ಆಶ್ರಮ ಕಟ್ಟಿಕೊಂಡು ಶಿಷ್ಯರಿಗೆ ವೇದಾಧ್ಯಯನ ಮಾಡುತ್ತಿದ್ದರು. ಶುಕ್ಲತೀರ್ಥ ಇಲ್ಲಿ ಹರಿಯುತ್ತಿದ್ದ ರಿಂದಲೂ ಈ ಪ್ರದೇಶಕ್ಕೆ ಬಿಳಿನೆಲೆ ಎಂಬ ಹೆಸರು ಬರಲು ಕಾರಣವಾಗಿರಬೇಕು. ಬಿಳಿನೆಲೆ ಪವಿತ್ರಕ್ಷೇತ್ರ ಎನಿಸಿಕೊಳ್ಳಲು ಹಾಗೂ ಅಲ್ಲಿ ಶ್ರೀ ಗೋಪಾಲ ಕೃಷ್ಣ ವಿಗ್ರಹ ಸ್ಥಾಪನೆಯಾದ ಬಗ್ಗೆ ನಿರ್ಧಾರಕ ಪೂರಕ ಆಧಾರಗಳು ಯಾವುವು ಸಿಗದಿದ್ದರೂ ದಂತಕಥೆಗಳ ಮೂಲಕ ಮತ್ತು ದೇವಾಲಯದಲ್ಲಿ ಕೆಲ ವರ್ಷಗಳ ಹಿಂದೆ ಇಟ್ಟ 5 ದಿನಗಳ ಅಷ್ಟಮಂಗಲ ಪ್ರಶ್ನೆಯಿಂದ ಭವ್ಯ ಇತಿಹಾಸ ತಿಳಿದು ಬರುತ್ತದೆ.

ತಪಸ್ವಿಗಳ ತಪೋಶಕ್ತಿಯಿಂದ ರೂಪುಗೊಂಡ ಬಿಳಿನೆಲೆ ಕ್ಷೇತ್ರ ಪವಿತ್ರ ಹಾಗೂ ಶಕ್ತಿದಾಯಕ ಎನ್ನುವುದರಲ್ಲಿ ಸಂಶಯವಿಲ್ಲ. ಭಕ್ತರ ಬಯಕೆಗಳನ್ನೆಲ್ಲ ಸಕಾಲದಲ್ಲಿ ನೀಡಿರುವ ಕಾರಣ ಕಾರಣಿಕವೂ ಆಗಿದೆ. ಸ್ಥಾಪನೆಗೊಂಡ ಗೋಪಾಲಕೃಷ್ಣ ಅದರಲ್ಲೂ ಬಾಲಗೋಪಾಲನ ಎರಡೂ ಕೈಗಳಲ್ಲಿ ಬೆಣ್ಣೆ ಹಿಡಿದು ದ್ವಿಬಾಹುಗಳನ್ನು ಕೂಡಿದವನಾಗಿದ್ದ ಮೂರ್ತಿ ಮುದ್ದುಮುದ್ದಾಗಿ ಚಿತ್ತಾಕರ್ಷಕವಾಗಿದೆ.

Advertisement

 

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

1 hour ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

6 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

9 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

9 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

9 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

18 hours ago