“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

March 31, 2026
6:47 AM
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ ಕೃಷಿ, ಪರಿಸರ ಮತ್ತು ಆರ್ಥಿಕತೆಯನ್ನು ಒಟ್ಟಿಗೆ ಬಲಪಡಿಸುತ್ತದೆ.

ಕೃಷಿ ಕೂಳೆ ಇನ್ನು ಮುಂದೆ ಮಾಲಿನ್ಯದ ಮೂಲವಲ್ಲ, ಆದಾಯದ ಮೂಲವಾಗಲಿದೆ. ಬಯೋ-ಬಿಟುಮೆನ್ ತಂತ್ರಜ್ಞಾನದಿಂದ ಕೂಳೆಯಿಂದ ರಸ್ತೆ ನಿರ್ಮಾಣ ಸಾಧ್ಯವಾಗುತ್ತಿದ್ದು, ರೈತರ ಆದಾಯ ಹೆಚ್ಚಿಸುವ ಜೊತೆಗೆ ಪರಿಸರ ರಕ್ಷಣೆಗೆ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

Advertisement

ಕೂಳೆ ಈಗ ಸಂಪತ್ತಾಗಲಿದೆ : ಹಿಂದೆ ರೈತರಿಗೆ ತೊಂದರೆ ಹಾಗೂ ಮಾಲಿನ್ಯದ ಕಾರಣವಾಗಿದ್ದ ಕೃಷಿ ಕೂಳೆ ಈಗ ಆದಾಯದ ಮೂಲವಾಗುತ್ತಿದೆ. ಹೊಸ ಬಯೋ-ಬಿಟುಮೆನ್ ತಂತ್ರಜ್ಞಾನ ಮೂಲಕ ಕೂಳೆಯನ್ನು ರಸ್ತೆ ನಿರ್ಮಾಣದಲ್ಲಿ ಬಳಸುವ ವ್ಯವಸ್ಥೆ ಅಭಿವೃದ್ಧಿಯಾಗಿದೆ.

ದೆಹಲಿಯಲ್ಲಿ ಮಹತ್ವದ ಘೋಷಣೆ : ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ದೆಹಲಿಯಲ್ಲಿ ನಡೆದ ತಂತ್ರಜ್ಞಾನ ವರ್ಗಾವಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇದು ದೇಶಕ್ಕೆ ಐತಿಹಾಸಿಕ ಹೆಜ್ಜೆ ಎಂದು ಹೇಳಿದರು. ಈ ತಂತ್ರಜ್ಞಾನವು ರೈತರ ಆದಾಯ ಹೆಚ್ಚಿಸುತ್ತದೆ, ಮಾಲಿನ್ಯ ಕಡಿಮೆ ಮಾಡುತ್ತದೆ, ಬಿಟುಮೆನ್ ಆಮದು ಕಡಿಮೆ ಮಾಡುತ್ತದೆ, ಸ್ವಾವಲಂಬಿ ಭಾರತ ಗುರಿಗೆ ನೆರವಾಗುತ್ತದೆ ಎನ್ನುವುದು ಈ ತಂತ್ರಜ್ಞಾನದ ಲಾಭಗಳು.

ಕೂಳೆ ಸುಡುವುದಕ್ಕೆ ಬ್ರೇಕ್ :  ಕೃಷಿ ಕೂಳೆ ಸುಡುವುದನ್ನು ಪ್ರಕೃತಿಗೆ ವಿರುದ್ಧವೆಂದು ಹೇಳಿದ ಸಚಿವರು, ಇದರಿಂದಾಗಿ ಸಣ್ಣ ಜೀವಿಗಳು ನಾಶವಾಗುತ್ತವೆ, ಮಣ್ಣಿನ ಆರೋಗ್ಯ ಹಾನಿಯಾಗುತ್ತದೆ ಹಾಗೂ ವಾಯು ಮಾಲಿನ್ಯ ಹೆಚ್ಚುತ್ತದೆ.  ಇದಕ್ಕೆ ಪರಿಹಾರವಾಗಿ ಕೂಳೆಯಿಂದ ಆದಾಯ ಗಳಿಸುವ ದಾರಿ ಕಂಡುಕೊಳ್ಳಲಾಗಿದೆ ಎಂದು ಹೇಳಿದರು.

ರೈತರಿಗೆ ಹೊಸ ಆದಾಯದ ದಾರಿ : ಹಿಂದೆ ಕೃಷಿ ಕೂಳೆಯನ್ನು ಪಶು ಮೇವು ಅಥವಾ ಗೃಹಬಳಕೆಗೆ ಬಳಸಲಾಗುತ್ತಿತ್ತು. ಆದರೆ ಈಗ ಸಮಯದ ಕೊರತೆಯಿಂದ ರೈತರು ಅದನ್ನು ಸುಡುತ್ತಿದ್ದರು. ಈ ಹೊಸ ತಂತ್ರಜ್ಞಾನದಿಂದ, ಕೂಳೆ ಖರೀದಿ ಮಾರುಕಟ್ಟೆ ಸೃಷ್ಟಿಯಾಗುತ್ತದೆ, ರೈತರಿಗೆ ಹೆಚ್ಚುವರಿ ಆದಾಯ ಸಿಗುತ್ತದೆ ಹಾಗೂ ತ್ಯಾಜ್ಯವು ಸಂಪತ್ತಾಗಿ ಮಾರ್ಪಡುತ್ತದೆ.

ಆಮದು ಕಡಿಮೆಯಾಗಲಿದೆ :  ಬಯೋ-ಬಿಟುಮೆನ್ ಬಳಕೆಯಿಂದ ದೇಶದ ಬಿಟುಮೆನ್ ಆಮದು ವೆಚ್ಚ ಕಡಿಮೆಯಾಗಲಿದೆ.  ಇದರಿಂದ ವರ್ಷಕ್ಕೆ ಸಾವಿರಾರು ಕೋಟಿ ರೂಪಾಯಿ ಉಳಿತಾಯವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಿಜ್ಞಾನ ಮತ್ತು ಕೃಷಿಯ ಸಂಗಮ :  ಸಚಿವರು ವಿಜ್ಞಾನಿಗಳನ್ನು ಶ್ಲಾಘಿಸಿ, ಇದು ಕೇವಲ ತಂತ್ರಜ್ಞಾನವಲ್ಲ. ಕೃಷಿ ಹಾಗೂ ವಿಜ್ಞಾನ ಮತ್ತು ರಸ್ತೆ ನಿರ್ಮಾಣದ ಅದ್ಭುತ ಸಂಯೋಜನೆ ಎಂದು ಹೇಳಿದರು. ಹೀಗಾಗಿ ಇದು  “ಜೈ ಕಿಸಾನ್, ಜೈ ಸೈನ್ಸ್” ಹೊಸ ಮಾದರಿಯಾಗಿದ್ದು ಇದರಿಂದಾಗಿ ರೈತರಿಗೆ ಹೊಸ ಮಾರುಕಟ್ಟೆ, ಪರಿಸರ ರಕ್ಷಣೆ ಹಾಗೂ ರಸ್ತೆ ಅಭಿವೃದ್ಧಿ ಇವುಗಳನ್ನೆಲ್ಲ ಒಟ್ಟಿಗೆ ಸಾಧಿಸುವ ಹೊಸ ಮಾದರಿಯಾಗಲಿದೆ ಎಂದು ಸಚಿವರು ಹೇಳಿದರು.

Bio-bitumen technology converts crop residue into material for road construction, reducing pollution and increasing farmers’ income. The initiative can lower import costs, support sustainability, and strengthen India’s self-reliance while solving stubble burning issues.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror