Advertisement
MIRROR FOCUS

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

Share

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ ಪ್ಲಾಸ್ಟಿಕನ್ನು ರೂಪಿಸಬಹುದು ಎಂಬ ಹೊಸ ಸಂಶೋಧನೆ ಬೆಳಕಿಗೆ ಬಂದಿದೆ. ಅಮೆರಿಕದ ರಟ್ಗರ್ಸ್ ವಿಶ್ವವಿದ್ಯಾಲಯದ ರಸಾಯನ ವಿಜ್ಞಾನಿ ಯುವೇಯಿ ಗು ನೇತೃತ್ವದ ತಂಡ ಈ ಸಾಧನೆಯನ್ನು ಮಾಡಿದೆ.

ಈ ಸಂಶೋಧನೆಯಲ್ಲಿ ಪ್ಲಾಸ್ಟಿಕ್ ಅಣುಗಳೊಳಗೆ ಅತಿ ಸಣ್ಣ “ದುರ್ಬಲ ಕೊಂಡಿ”ಗಳನ್ನು ರೂಪಿಸಲಾಗಿದ್ದು, ಬಳಕೆಯ ಸಮಯದಲ್ಲಿ ಪ್ಲಾಸ್ಟಿಕ್ ಗಟ್ಟಿಯಾಗಿರುತ್ತದೆ. ಆದರೆ ತ್ಯಜಿಸಿದ ನಂತರ ತೇವ, ಗಾಳಿ, ಬೆಳಕು ಅಥವಾ ಹಾನಿಯಿಲ್ಲದ ಲೋಹ ಅಂಶಗಳ ಸ್ಪರ್ಶಕ್ಕೆ ಬಂದಾಗ ವೇಗವಾಗಿ ಕರಗುತ್ತದೆ.  ಪ್ಲಾಸ್ಟಿಕ್‌ನ ಮೂಲ ರಚನೆಯನ್ನು ಬದಲಾಯಿಸದೇ, ಅದರ ಅಣುಗಳ ಜೋಡಣೆಯನ್ನು ಬದಲಿಸುವ ಮೂಲಕ ಕುಸಿಯುವ ಸಮಯವನ್ನು ನಿಯಂತ್ರಿಸಬಹುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಪ್ರಾರಂಭಿಕ ಪರೀಕ್ಷೆಗಳಲ್ಲಿ ಕುಸಿತದಿಂದ ಉಂಟಾಗುವ ದ್ರವಗಳು ವಿಷಕಾರಿಯಾಗಿಲ್ಲವೆಂದು ಕಂಡುಬಂದಿದೆ.

ಈ ತಂತ್ರಜ್ಞಾನದಲ್ಲಿ ಮತ್ತೊಂದು ವಿಶೇಷತೆ ಎಂದರೆ, ಪ್ಲಾಸ್ಟಿಕ್ ಎಷ್ಟು ದಿನ ಉಳಿಯಬೇಕು ಎಂಬುದನ್ನು ಅದರ ಅಣುಗಳ ಜೋಡಣೆಯ ಮೂಲಕ ನಿಯಂತ್ರಿಸಬಹುದು. ಉದಾಹರಣೆಗೆ, ಆಹಾರ ಪ್ಯಾಕೇಜಿಂಗ್‌ಗೆ ಕೆಲವು ದಿನಗಳಲ್ಲಿ ಕುಸಿಯುವ ಪ್ಲಾಸ್ಟಿಕ್ ಬಳಸಬಹುದು. ಕೃಷಿಯಲ್ಲಿ ಬೆಳೆ ರಕ್ಷಣೆಗೆ ಬಳಸುವ ಹಾಳೆಗಳು ಒಂದು ಋತುವಿನ ನಂತರ ಸ್ವಯಂ ನಾಶವಾಗಬಹುದು.‌ ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪ್ರಾರಂಭಿಕ ಪ್ರಯೋಗಗಳಲ್ಲಿ ಪ್ಲಾಸ್ಟಿಕ್ ಕುಸಿದ ನಂತರ ಉಂಟಾಗುವ ದ್ರವಗಳು ವಿಷಕಾರಿಯಾಗಿಲ್ಲವೆಂದು ಕಂಡುಬಂದಿದೆ. ಆದರೂ, ಮಣ್ಣು, ನೀರು ಮತ್ತು ಜೀವಜಾಲದ ಮೇಲೆ ಇದರ ದೀರ್ಘಕಾಲೀನ ಪರಿಣಾಮಗಳ ಕುರಿತು ಹೆಚ್ಚಿನ ಅಧ್ಯಯನ ನಡೆಯುತ್ತಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಈ ಹೊಸ ತಂತ್ರಜ್ಞಾನವನ್ನು ಈಗಿರುವ ಪ್ಲಾಸ್ಟಿಕ್ ಉತ್ಪಾದನಾ ಘಟಕಗಳಲ್ಲೇ ಅಳವಡಿಸಬಹುದೇ ಎಂಬುದರ ಕುರಿತು ಕೈಗಾರಿಕಾ ಸಂಸ್ಥೆಗಳೊಂದಿಗೆ ಚರ್ಚೆ ನಡೆಯುತ್ತಿದೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಬದಲಾವಣೆ ಅಗತ್ಯವಿಲ್ಲದಿದ್ದರೆ, ಈ ತಂತ್ರಜ್ಞಾನವನ್ನು ವೇಗವಾಗಿ ಅಳವಡಿಸಿಕೊಳ್ಳಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisement

ಈ ತಂತ್ರಜ್ಞಾನವನ್ನು ಆಹಾರ ಪ್ಯಾಕೇಜಿಂಗ್‌, ಕೃಷಿ ಬಳಕೆಗಳು, ವೈದ್ಯಕೀಯ ಉಪಕರಣಗಳು ಮತ್ತು ತಾತ್ಕಾಲಿಕ ಲೇಪನಗಳಲ್ಲಿ ಬಳಸಬಹುದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಅಧ್ಯಯನ ನೇಚರ್ ಕೆಮಿಸ್ಟ್ರಿ ಜರ್ನಲ್‌ನಲ್ಲಿ ಪ್ರಕಟವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

3 minutes ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

9 minutes ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

1 hour ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

1 hour ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

1 hour ago

ಹೊಟ್ಟೆಯ ಕೊಬ್ಬು ಕರಗಿಸಲು ಸೋರೆಕಾಯಿ ಜ್ಯೂಸ್

ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…

1 hour ago