Advertisement
MIRROR FOCUS

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

Share

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ ಪ್ಲಾಸ್ಟಿಕನ್ನು ರೂಪಿಸಬಹುದು ಎಂಬ ಹೊಸ ಸಂಶೋಧನೆ ಬೆಳಕಿಗೆ ಬಂದಿದೆ. ಅಮೆರಿಕದ ರಟ್ಗರ್ಸ್ ವಿಶ್ವವಿದ್ಯಾಲಯದ ರಸಾಯನ ವಿಜ್ಞಾನಿ ಯುವೇಯಿ ಗು ನೇತೃತ್ವದ ತಂಡ ಈ ಸಾಧನೆಯನ್ನು ಮಾಡಿದೆ.

ಈ ಸಂಶೋಧನೆಯಲ್ಲಿ ಪ್ಲಾಸ್ಟಿಕ್ ಅಣುಗಳೊಳಗೆ ಅತಿ ಸಣ್ಣ “ದುರ್ಬಲ ಕೊಂಡಿ”ಗಳನ್ನು ರೂಪಿಸಲಾಗಿದ್ದು, ಬಳಕೆಯ ಸಮಯದಲ್ಲಿ ಪ್ಲಾಸ್ಟಿಕ್ ಗಟ್ಟಿಯಾಗಿರುತ್ತದೆ. ಆದರೆ ತ್ಯಜಿಸಿದ ನಂತರ ತೇವ, ಗಾಳಿ, ಬೆಳಕು ಅಥವಾ ಹಾನಿಯಿಲ್ಲದ ಲೋಹ ಅಂಶಗಳ ಸ್ಪರ್ಶಕ್ಕೆ ಬಂದಾಗ ವೇಗವಾಗಿ ಕರಗುತ್ತದೆ.  ಪ್ಲಾಸ್ಟಿಕ್‌ನ ಮೂಲ ರಚನೆಯನ್ನು ಬದಲಾಯಿಸದೇ, ಅದರ ಅಣುಗಳ ಜೋಡಣೆಯನ್ನು ಬದಲಿಸುವ ಮೂಲಕ ಕುಸಿಯುವ ಸಮಯವನ್ನು ನಿಯಂತ್ರಿಸಬಹುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಪ್ರಾರಂಭಿಕ ಪರೀಕ್ಷೆಗಳಲ್ಲಿ ಕುಸಿತದಿಂದ ಉಂಟಾಗುವ ದ್ರವಗಳು ವಿಷಕಾರಿಯಾಗಿಲ್ಲವೆಂದು ಕಂಡುಬಂದಿದೆ.

ಈ ತಂತ್ರಜ್ಞಾನದಲ್ಲಿ ಮತ್ತೊಂದು ವಿಶೇಷತೆ ಎಂದರೆ, ಪ್ಲಾಸ್ಟಿಕ್ ಎಷ್ಟು ದಿನ ಉಳಿಯಬೇಕು ಎಂಬುದನ್ನು ಅದರ ಅಣುಗಳ ಜೋಡಣೆಯ ಮೂಲಕ ನಿಯಂತ್ರಿಸಬಹುದು. ಉದಾಹರಣೆಗೆ, ಆಹಾರ ಪ್ಯಾಕೇಜಿಂಗ್‌ಗೆ ಕೆಲವು ದಿನಗಳಲ್ಲಿ ಕುಸಿಯುವ ಪ್ಲಾಸ್ಟಿಕ್ ಬಳಸಬಹುದು. ಕೃಷಿಯಲ್ಲಿ ಬೆಳೆ ರಕ್ಷಣೆಗೆ ಬಳಸುವ ಹಾಳೆಗಳು ಒಂದು ಋತುವಿನ ನಂತರ ಸ್ವಯಂ ನಾಶವಾಗಬಹುದು.‌ ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪ್ರಾರಂಭಿಕ ಪ್ರಯೋಗಗಳಲ್ಲಿ ಪ್ಲಾಸ್ಟಿಕ್ ಕುಸಿದ ನಂತರ ಉಂಟಾಗುವ ದ್ರವಗಳು ವಿಷಕಾರಿಯಾಗಿಲ್ಲವೆಂದು ಕಂಡುಬಂದಿದೆ. ಆದರೂ, ಮಣ್ಣು, ನೀರು ಮತ್ತು ಜೀವಜಾಲದ ಮೇಲೆ ಇದರ ದೀರ್ಘಕಾಲೀನ ಪರಿಣಾಮಗಳ ಕುರಿತು ಹೆಚ್ಚಿನ ಅಧ್ಯಯನ ನಡೆಯುತ್ತಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಈ ಹೊಸ ತಂತ್ರಜ್ಞಾನವನ್ನು ಈಗಿರುವ ಪ್ಲಾಸ್ಟಿಕ್ ಉತ್ಪಾದನಾ ಘಟಕಗಳಲ್ಲೇ ಅಳವಡಿಸಬಹುದೇ ಎಂಬುದರ ಕುರಿತು ಕೈಗಾರಿಕಾ ಸಂಸ್ಥೆಗಳೊಂದಿಗೆ ಚರ್ಚೆ ನಡೆಯುತ್ತಿದೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಬದಲಾವಣೆ ಅಗತ್ಯವಿಲ್ಲದಿದ್ದರೆ, ಈ ತಂತ್ರಜ್ಞಾನವನ್ನು ವೇಗವಾಗಿ ಅಳವಡಿಸಿಕೊಳ್ಳಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ತಂತ್ರಜ್ಞಾನವನ್ನು ಆಹಾರ ಪ್ಯಾಕೇಜಿಂಗ್‌, ಕೃಷಿ ಬಳಕೆಗಳು, ವೈದ್ಯಕೀಯ ಉಪಕರಣಗಳು ಮತ್ತು ತಾತ್ಕಾಲಿಕ ಲೇಪನಗಳಲ್ಲಿ ಬಳಸಬಹುದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಅಧ್ಯಯನ ನೇಚರ್ ಕೆಮಿಸ್ಟ್ರಿ ಜರ್ನಲ್‌ನಲ್ಲಿ ಪ್ರಕಟವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

5 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

9 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago