ಸುದ್ದಿಗಳು

ಪಕ್ಷಿ ಪ್ರೇಮಿ | ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳಿಗೆ ಆಶ್ರಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಮನಗರ ಜಿಲ್ಲೆ ಕನಕಪುರದ ಮರಸಪ್ಪ ರವಿ ಎಂಬುವರು ಹಕ್ಕಿಗಳ ರಕ್ಷಣೆ ಅದರಲ್ಲೂ ಗುಬ್ಬಚ್ಚಿ ರಕ್ಷಿಸಲು ಪ್ರಯತ್ನ ಮಾಡುತ್ತಿದ್ದಾರೆ.

Advertisement

ಮರಸಪ್ಪ ಅವರು ತಮ್ಮ ಪುಟ್ಟ ಮನೆಯ ಮುಂಭಾಗದ ಮರದಲ್ಲಿ ರಂಧ್ರಗಳನ್ನು ಕೊರೆದು ಗುಬ್ಬಚ್ಚಿಗಳು ನೆಲೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪಕ್ಷಿ ಪ್ರೇಮಿ ಮರಸಪ್ಪ ರವಿ ಅವರು ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳ ಉಳಿವಿಗಾಗಿ ಈ ಮೂಲಕ ಪ್ರಯತ್ನ ನಡೆಸುತ್ತಿದ್ದಾರೆ.

ನಿತ್ಯ ಪಕ್ಷಿಗಳಿಗೆ ಧಾನ್ಯ, ಕಾಳುಗಳನ್ನು ಹಾಕಿ ನೀರು ಒದಗಿಸುವ ಮೂಲಕ ಪಕ್ಷಿಗಳನ್ನು ಪೋಷಿಸಲಾಗುತ್ತಿದೆ. ಮನೆಯ ಸುತ್ತಲು ಸ್ಥಳದಲ್ಲಿ ಹತ್ತಾರು ಬಗೆಯ ಮರ, ಹೂವಿನ ಗಿಡಗಳನ್ನು ಬೆಳೆಸಿದ್ದಾರೆ.

ಗುಬ್ಬಿ, ಗುಬ್ಬಚ್ಚಿ, ಕಾಜಾಣ, ಕೋಗಿಲೆ, ಗಿಣಿ ಹಾಗೂ ಅಪರೂಪದ ಸನ್ ಬರ್ಡ್ ಪಕ್ಷಿಗಳು ಇವರ ಕಿರು ಉದ್ಯಾನಕ್ಕೆ ನಿತ್ಯ ಆಗಮಿಸುತ್ತವೆ. ಪರಿಸರ ಸಂರಕ್ಷಣೆಯ ಬಗ್ಗೆಯೂ ಅಪಾರ ಆಸಕ್ತಿ ಹೊಂದಿರುವ ಮರಸಪ್ಪ ರವಿ ಅವರು ಪ್ರತಿ ವರ್ಷ ಹತ್ತಾರು ಶಾಲೆಗಳಿಗೆ ಹಾಗೂ ಹಳ್ಳಿಗಳಿಗೆ ಸಸಿಗಳನ್ನು ವಿತರಿಸಿ, ಗಿಡಗಳನ್ನು ಬೆಳೆಸಲು ಉತ್ತೇಜನ ನೀಡುತ್ತಿದ್ದಾರೆ.

ಕನಕಪುರ ಸ್ಥಳೀಯ ಲಯನ್ಸ್ ಸಂಸ್ಥೆಯ ಪರಿಸರ ಸಮಿತಿ ಅಧ್ಯಕ್ಷರಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮರಸಪ್ಪರವಿ, ಹತ್ತಾರು ಹಳ್ಳಿಯಲ್ಲಿ ಜಗತಿಕಟ್ಟೆ ನಿರ್ಮಿಸಿ ಮಾದರಿಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

4 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

4 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

4 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

5 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

5 hours ago