Advertisement
ಸುದ್ದಿಗಳು

ಪಕ್ಷಿ ಪ್ರೇಮಿ | ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳಿಗೆ ಆಶ್ರಯ

Share

ರಾಮನಗರ ಜಿಲ್ಲೆ ಕನಕಪುರದ ಮರಸಪ್ಪ ರವಿ ಎಂಬುವರು ಹಕ್ಕಿಗಳ ರಕ್ಷಣೆ ಅದರಲ್ಲೂ ಗುಬ್ಬಚ್ಚಿ ರಕ್ಷಿಸಲು ಪ್ರಯತ್ನ ಮಾಡುತ್ತಿದ್ದಾರೆ.

ಮರಸಪ್ಪ ಅವರು ತಮ್ಮ ಪುಟ್ಟ ಮನೆಯ ಮುಂಭಾಗದ ಮರದಲ್ಲಿ ರಂಧ್ರಗಳನ್ನು ಕೊರೆದು ಗುಬ್ಬಚ್ಚಿಗಳು ನೆಲೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪಕ್ಷಿ ಪ್ರೇಮಿ ಮರಸಪ್ಪ ರವಿ ಅವರು ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳ ಉಳಿವಿಗಾಗಿ ಈ ಮೂಲಕ ಪ್ರಯತ್ನ ನಡೆಸುತ್ತಿದ್ದಾರೆ.

ನಿತ್ಯ ಪಕ್ಷಿಗಳಿಗೆ ಧಾನ್ಯ, ಕಾಳುಗಳನ್ನು ಹಾಕಿ ನೀರು ಒದಗಿಸುವ ಮೂಲಕ ಪಕ್ಷಿಗಳನ್ನು ಪೋಷಿಸಲಾಗುತ್ತಿದೆ. ಮನೆಯ ಸುತ್ತಲು ಸ್ಥಳದಲ್ಲಿ ಹತ್ತಾರು ಬಗೆಯ ಮರ, ಹೂವಿನ ಗಿಡಗಳನ್ನು ಬೆಳೆಸಿದ್ದಾರೆ.

ಗುಬ್ಬಿ, ಗುಬ್ಬಚ್ಚಿ, ಕಾಜಾಣ, ಕೋಗಿಲೆ, ಗಿಣಿ ಹಾಗೂ ಅಪರೂಪದ ಸನ್ ಬರ್ಡ್ ಪಕ್ಷಿಗಳು ಇವರ ಕಿರು ಉದ್ಯಾನಕ್ಕೆ ನಿತ್ಯ ಆಗಮಿಸುತ್ತವೆ. ಪರಿಸರ ಸಂರಕ್ಷಣೆಯ ಬಗ್ಗೆಯೂ ಅಪಾರ ಆಸಕ್ತಿ ಹೊಂದಿರುವ ಮರಸಪ್ಪ ರವಿ ಅವರು ಪ್ರತಿ ವರ್ಷ ಹತ್ತಾರು ಶಾಲೆಗಳಿಗೆ ಹಾಗೂ ಹಳ್ಳಿಗಳಿಗೆ ಸಸಿಗಳನ್ನು ವಿತರಿಸಿ, ಗಿಡಗಳನ್ನು ಬೆಳೆಸಲು ಉತ್ತೇಜನ ನೀಡುತ್ತಿದ್ದಾರೆ.

ಕನಕಪುರ ಸ್ಥಳೀಯ ಲಯನ್ಸ್ ಸಂಸ್ಥೆಯ ಪರಿಸರ ಸಮಿತಿ ಅಧ್ಯಕ್ಷರಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮರಸಪ್ಪರವಿ, ಹತ್ತಾರು ಹಳ್ಳಿಯಲ್ಲಿ ಜಗತಿಕಟ್ಟೆ ನಿರ್ಮಿಸಿ ಮಾದರಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

21 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago