Advertisement
ಸುದ್ದಿಗಳು

ಪಕ್ಷಿ ಪ್ರೇಮಿ | ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳಿಗೆ ಆಶ್ರಯ

Share

ರಾಮನಗರ ಜಿಲ್ಲೆ ಕನಕಪುರದ ಮರಸಪ್ಪ ರವಿ ಎಂಬುವರು ಹಕ್ಕಿಗಳ ರಕ್ಷಣೆ ಅದರಲ್ಲೂ ಗುಬ್ಬಚ್ಚಿ ರಕ್ಷಿಸಲು ಪ್ರಯತ್ನ ಮಾಡುತ್ತಿದ್ದಾರೆ.

ಮರಸಪ್ಪ ಅವರು ತಮ್ಮ ಪುಟ್ಟ ಮನೆಯ ಮುಂಭಾಗದ ಮರದಲ್ಲಿ ರಂಧ್ರಗಳನ್ನು ಕೊರೆದು ಗುಬ್ಬಚ್ಚಿಗಳು ನೆಲೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪಕ್ಷಿ ಪ್ರೇಮಿ ಮರಸಪ್ಪ ರವಿ ಅವರು ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳ ಉಳಿವಿಗಾಗಿ ಈ ಮೂಲಕ ಪ್ರಯತ್ನ ನಡೆಸುತ್ತಿದ್ದಾರೆ.

ನಿತ್ಯ ಪಕ್ಷಿಗಳಿಗೆ ಧಾನ್ಯ, ಕಾಳುಗಳನ್ನು ಹಾಕಿ ನೀರು ಒದಗಿಸುವ ಮೂಲಕ ಪಕ್ಷಿಗಳನ್ನು ಪೋಷಿಸಲಾಗುತ್ತಿದೆ. ಮನೆಯ ಸುತ್ತಲು ಸ್ಥಳದಲ್ಲಿ ಹತ್ತಾರು ಬಗೆಯ ಮರ, ಹೂವಿನ ಗಿಡಗಳನ್ನು ಬೆಳೆಸಿದ್ದಾರೆ.

ಗುಬ್ಬಿ, ಗುಬ್ಬಚ್ಚಿ, ಕಾಜಾಣ, ಕೋಗಿಲೆ, ಗಿಣಿ ಹಾಗೂ ಅಪರೂಪದ ಸನ್ ಬರ್ಡ್ ಪಕ್ಷಿಗಳು ಇವರ ಕಿರು ಉದ್ಯಾನಕ್ಕೆ ನಿತ್ಯ ಆಗಮಿಸುತ್ತವೆ. ಪರಿಸರ ಸಂರಕ್ಷಣೆಯ ಬಗ್ಗೆಯೂ ಅಪಾರ ಆಸಕ್ತಿ ಹೊಂದಿರುವ ಮರಸಪ್ಪ ರವಿ ಅವರು ಪ್ರತಿ ವರ್ಷ ಹತ್ತಾರು ಶಾಲೆಗಳಿಗೆ ಹಾಗೂ ಹಳ್ಳಿಗಳಿಗೆ ಸಸಿಗಳನ್ನು ವಿತರಿಸಿ, ಗಿಡಗಳನ್ನು ಬೆಳೆಸಲು ಉತ್ತೇಜನ ನೀಡುತ್ತಿದ್ದಾರೆ.

ಕನಕಪುರ ಸ್ಥಳೀಯ ಲಯನ್ಸ್ ಸಂಸ್ಥೆಯ ಪರಿಸರ ಸಮಿತಿ ಅಧ್ಯಕ್ಷರಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮರಸಪ್ಪರವಿ, ಹತ್ತಾರು ಹಳ್ಳಿಯಲ್ಲಿ ಜಗತಿಕಟ್ಟೆ ನಿರ್ಮಿಸಿ ಮಾದರಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

7 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

8 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

17 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

18 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

18 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

23 hours ago