Advertisement
ಸುದ್ದಿಗಳು

ಪಕ್ಷಿ ಪ್ರೇಮಿ | ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳಿಗೆ ಆಶ್ರಯ

Share

ರಾಮನಗರ ಜಿಲ್ಲೆ ಕನಕಪುರದ ಮರಸಪ್ಪ ರವಿ ಎಂಬುವರು ಹಕ್ಕಿಗಳ ರಕ್ಷಣೆ ಅದರಲ್ಲೂ ಗುಬ್ಬಚ್ಚಿ ರಕ್ಷಿಸಲು ಪ್ರಯತ್ನ ಮಾಡುತ್ತಿದ್ದಾರೆ.

ಮರಸಪ್ಪ ಅವರು ತಮ್ಮ ಪುಟ್ಟ ಮನೆಯ ಮುಂಭಾಗದ ಮರದಲ್ಲಿ ರಂಧ್ರಗಳನ್ನು ಕೊರೆದು ಗುಬ್ಬಚ್ಚಿಗಳು ನೆಲೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪಕ್ಷಿ ಪ್ರೇಮಿ ಮರಸಪ್ಪ ರವಿ ಅವರು ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳ ಉಳಿವಿಗಾಗಿ ಈ ಮೂಲಕ ಪ್ರಯತ್ನ ನಡೆಸುತ್ತಿದ್ದಾರೆ.

ನಿತ್ಯ ಪಕ್ಷಿಗಳಿಗೆ ಧಾನ್ಯ, ಕಾಳುಗಳನ್ನು ಹಾಕಿ ನೀರು ಒದಗಿಸುವ ಮೂಲಕ ಪಕ್ಷಿಗಳನ್ನು ಪೋಷಿಸಲಾಗುತ್ತಿದೆ. ಮನೆಯ ಸುತ್ತಲು ಸ್ಥಳದಲ್ಲಿ ಹತ್ತಾರು ಬಗೆಯ ಮರ, ಹೂವಿನ ಗಿಡಗಳನ್ನು ಬೆಳೆಸಿದ್ದಾರೆ.

ಗುಬ್ಬಿ, ಗುಬ್ಬಚ್ಚಿ, ಕಾಜಾಣ, ಕೋಗಿಲೆ, ಗಿಣಿ ಹಾಗೂ ಅಪರೂಪದ ಸನ್ ಬರ್ಡ್ ಪಕ್ಷಿಗಳು ಇವರ ಕಿರು ಉದ್ಯಾನಕ್ಕೆ ನಿತ್ಯ ಆಗಮಿಸುತ್ತವೆ. ಪರಿಸರ ಸಂರಕ್ಷಣೆಯ ಬಗ್ಗೆಯೂ ಅಪಾರ ಆಸಕ್ತಿ ಹೊಂದಿರುವ ಮರಸಪ್ಪ ರವಿ ಅವರು ಪ್ರತಿ ವರ್ಷ ಹತ್ತಾರು ಶಾಲೆಗಳಿಗೆ ಹಾಗೂ ಹಳ್ಳಿಗಳಿಗೆ ಸಸಿಗಳನ್ನು ವಿತರಿಸಿ, ಗಿಡಗಳನ್ನು ಬೆಳೆಸಲು ಉತ್ತೇಜನ ನೀಡುತ್ತಿದ್ದಾರೆ.

ಕನಕಪುರ ಸ್ಥಳೀಯ ಲಯನ್ಸ್ ಸಂಸ್ಥೆಯ ಪರಿಸರ ಸಮಿತಿ ಅಧ್ಯಕ್ಷರಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮರಸಪ್ಪರವಿ, ಹತ್ತಾರು ಹಳ್ಳಿಯಲ್ಲಿ ಜಗತಿಕಟ್ಟೆ ನಿರ್ಮಿಸಿ ಮಾದರಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

23 minutes ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

5 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

11 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

11 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago