Advertisement
ಮಣ್ಣಿಗೆ ಮೆಟ್ಟಿಲು

ಪರ್ಪುಂಜದ ಸೌಗಂಧಿಕಾದಲ್ಲಿ ಹಕ್ಕಿಗಳು ಗೂಡುಕಟ್ಟಿವೆ…… ! | ಬಣ್ಣ ಬಣ್ಣದ ಹಕ್ಕಿಗಳು ಬಂದಿವೆ ಇಲ್ಲಿಗೆ…. !

Share

ಇಲ್ಲಿ ಹಕ್ಕಿಗಳು ಬಂದು ಗೂಡುಕಟ್ಟಿವೆ. ರಾಜ್ಯದ ವಿವಿದೆಡೆ ಇರುವ, ನಮ್ಮ ನಡುವೆಯೇ ಹಾರಾಡುವ ಹಕ್ಕಿಗಳು ಇಲ್ಲಿ ಕಾಣುತ್ತವೆ. ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ಈಗ ಹಕ್ಕಿಗಳ ಲೋಕ ಇದೆ. ನವೆಂಬರ್‌ 21 ರ ವರೆಗೆ ಈ ಹಕ್ಕಿಗಳು ಇಲ್ಲಿರಲಿದೆ. ಅಂದ ಹಾಗೆ ಇದು ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಕ್ಲಿಕ್ಕಿಸಿರುವ ಹಕ್ಕಿಗಳ ಚಿತ್ರ ಪ್ರದರ್ಶನ…!

 

ಪುತ್ತೂರಿನ ಪರ್ಪುಂಜ ಬಳಿಕ ಸೌಗಂಧಿಕಾ ವನವು ಪರಿಸರ ಲೋಕ. ವಿವಿಧ ಬಗೆಯ ಗಿಡಗಳು ಇಲ್ಲಿ ಮಾರಾಟ ಹಾಗೂ ಪ್ರದರ್ಶನ ಇರುತ್ತದೆ. ಅದರ ಜೊತೆಗೇ ಇಲ್ಲಿ ಕಲೆಯ ಆರಾಧನೆ ನಡೆಯುತ್ತಿದೆ. ಪರಿಸರಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆ, ಕೃಷಿ ಸಂಬಂಧಿಕ ಕಾರ್ಯಾಗಾರ, ಕಲೆ, ನಾಟಕ ಹೀಗೇ ವಿವಿಧ ಚಟುವಟಿಕೆಗಳೂ ಇಲ್ಲಿ ನಡೆಯುತ್ತದೆ. ಚಂದ್ರ ಅವರ ನೇತೃತ್ವದಲ್ಲಿ ಅವರ ಗೆಳೆಯರ ತಂಡ ಸದಾ ಇಲ್ಲಿ ಕ್ರಿಯಾತ್ಮಕ ಚಟುವಟಿಕೆ ನಡೆಸುತ್ತಿದ್ದಾರೆ. ಈ ಬಾರಿ ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ತೆಗೆದಿರುವ ಹಕ್ಕಿಗಳ ಚಿತ್ರ ಪ್ರದರ್ಶನ ನಡೆಯುತ್ತಿದೆ. ನವೆಂಬರ್‌ 21  ರ ವರೆಗೆ ಈ ಪ್ರದರ್ಶನ ನಡೆಯಲಿದೆ. ಅದ್ಭುತ ಚಿತ್ರಗಳ ಲೋಕ ಇಲ್ಲಿದ್ದು ಸುಮಾರು  40 ಹಕ್ಕಿಗಳ ಚಿತ್ರ ಇಲ್ಲಿದೆ.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಮಾತನಾಡಿ, ಹಕ್ಕಿಗಳು ಇಲ್ಲದ ಜಗತ್ತು ಹೇಗಿರಬಹುದು ? ಊಹಿಸಲೂ ಕಷ್ಟವಿದೆ. ಹಕ್ಕಿಗಳ ಕಲರವ ಸದಾ ಇದ್ದರೆ ಮಾತ್ರವೇ ಪರಿಸರವೂ ಸಹ್ಯ. ಈಗಾಗಲೇ ಗುಬ್ಬಚ್ಚಿಯಂತಹ ಹಕ್ಕಿಗಳು ಮಾಯವಾಗುತ್ತಿವೆ, ಇನ್ನೂ ಅನೇಕ ಹಕ್ಕಿಗಳೂ ಕಾಣೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಹಕ್ಕಿಗಳ ಲೋಕವನ್ನು ಇಲ್ಲಿ ಶಿವಸುಬ್ರಹ್ಮಣ್ಯ ಸೃಷ್ಟಿಸಿದ್ದಾರೆ. ನಾವೆಲ್ಲರೂ ಇದನ್ನು ನೋಡಿ ನೈಜ ಹಕ್ಕಿಗಳ ರಕ್ಷಣೆಯ ಜವಾಬ್ದಾರಿ ಹೊರಬೇಕು ಎಂದರು.ʼ

ಕಾರ್ಯಕ್ರಮದಲ್ಲಿ ಮಾತನಾಡಿದ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ, ಹಕ್ಕಿಗಳ ವೀಕ್ಷಣೆಯ ಆಸಕ್ತಿಯನ್ನು ಮಕ್ಕಳಿಗೆ ಕಲಿಸಬೇಕು. ಮಕ್ಕಳಲ್ಲಿ  ಹಕ್ಕಿ ಪ್ರೀತಿ ಹೆಚ್ಚಾದಷ್ಟು ಮುಂದೆ ಪರಿಸರವೂ ಉಳಿಯಲೂ, ಬೆಳೆಯಲೂ ಸಾಧ್ಯವಿದೆ ಎಂದರು. ಈ ದೇಶದ ಎಲ್ಲಾ ಹಕ್ಕಿಗಳೂ ಕೃಷಿಕ ಸ್ನೇಹಿಯಾಗಿವೆ. ಹಕ್ಕಿಗಳು ಹಣ್ಣುಗಳನ್ನು ತಿಂದು ಹಿಕ್ಕೆ ಹಾಕುವಲ್ಲಿ ಗಿಡಗಳೂ ಬೆಳೆಯಲು ಸಾಧ್ಯವಿದೆ. ಹೀಗಾಗಿ ಹಕ್ಕಿಗಳು ಹೆಚ್ಚಾದಷ್ಟು ಗೊತ್ತಿಲ್ಲದೆಯೇ ಪರಿಸರ ಬೆಳೆಯುತ್ತದೆ ಎಂದರು.

ಶೋಭಾ ಪುತ್ತೂರು ಸ್ವಾಗತಿಸಿ, ವಿನಿತಾ ಶೆಟ್ಟಿ ಮಾಣಿ ವಂದಿಸಿದರು. ಸೌಗಂಧಿಕಾದ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಚಿತ್ರ ಪ್ರದರ್ಶನದ ತಯಾರಿಗೆ ಮಾಧವ, ಕಿರಣ್‌ ಮಯ್ಯ, ವಿನಾಯಕ ನಾಯಕ್‌, ರಾಜೇಶ್‌ ಶರ್ಮ, ಅನ್ನಪೂರ್ಣ ರಾವ್‌, ಶೋಭಾ , ಅಂಜಲಿ , ಪೃಥ್ವಿ, , ವಿದ್ಯಾ, ಅಜಿತ್‌ ರೈ ಸಹಕರಿಸಿದ್ದರು.

 

 

ಹಕ್ಕಿಗಳ ಲೋಕದಿಂದ ಹೆಕ್ಕಿದ್ದು.....!

ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರ ಮೂರನೇ ಕಣ್ಣು ಸೆರೆ ಹಿಡಿದ  ಪಕ್ಷಿಗಳ ಛಾಯಾಚಿತ್ರ ಪ್ರದರ್ಶನ ನೋಡುಗರಿಗೆ ಆಸಕ್ತಿ ಹೆಚ್ಚಿಸಿತು. ಕೆಲವು ಹಕ್ಕಿಗಳ ಬಗ್ಗೆ ಅವರು ವಿವರಿಸುತ್ತಿದ್ದುದು ಕೇಳಿ ಅಚ್ಚರಿ ಪಟ್ಟರು. ” ಒಂದು ಹಕ್ಕಿಯ ಚಿತ್ರ ತೆಗೆಯಲು ಸುಮಾರು  15 ದಿನಗಳ ಕಾಲ ಸತತವಾಗಿ ನಾನು ಹೋಗಿದ್ದೆ. ಕೊನೆಗೊಂದು ದಿನ ಹಕ್ಕಿಯೇ ಬಂದು ನನ್ನ ಹೆಗಲ ಮೇಲೆ ಕೂತಿತು. ಆ ದಿನ ನಾನು ಸಂತಸಪಟ್ಟೆ ” ಎಂದಾಗ ಸಭೆಯಲ್ಲಿದ್ದ ಅಷ್ಟೂ ಮಂದಿ ಹುಬ್ಬೇರಿಸಿದರು. 

ಹಕ್ಕಿಯ ಚಿತ್ರ ತೆಗೆಯುವುದು ಅಂದರೆ ಅದೊಂದು ತಪಸ್ಸು. ಧ್ಯಾನಸ್ಥರಾಗಿ ಕುಳಿತುಕೊಳ್ಳಬೇಕು, ಹಕ್ಕಿ ಬರುವವರೆಗೆ ಕಾಯಬೇಕು, ಕಾದರೂ ಗಡಿಬಿಡಿ ಮಾಡಬಾರದು, ಇನ್ನೊಮ್ಮೆ ಬರಬೇಕು… ಹೀಗೇ ಅದೊಂದು ಧ್ಯಾನಸ್ಥ ಮನಸ್ಸು. ಈ ಬಗ್ಗೆ ಹೇಳಿದ ಶಿವಸುಬ್ರಹ್ಮಣ್ಯ, ” ಒಂದು ಹಕ್ಕಿಯ ಫೋಟೊ ತೆಗೆಯುವುದಕ್ಕೆ ತಿಂಗಳುಗಟ್ಟಲೆ ಹೋಗಿದ್ದೆ, ಮನೆಯಲ್ಲಿ ಸುಳ್ಳು ಹೇಳಿಯೂ ಹೋಗಿದ್ದಿದೆ, ಒಂದು ಹಕ್ಕಿಯ ಫೋಟೊ ತೆಗೆಯಲು 45  ಸಾವಿರ ಖರ್ಚು ಮಾಡಿದ್ದಿದೆ ” ಎಂದು ವಿವರಿಸಿದರು.

ಕನ್ನಡಪ್ರಭ, ಹೊಸ ದಿಗಂತ, ಉದಯವಾಣಿ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಶಿವಸುಬ್ರಮಣ್ಯ ಕಲ್ಮಡ್ಕ  ಅವರದು ಮೂರು ದಶಕಗಳಿಗಿಂತಲೂ ಹೆಚ್ಚು ಸಮಯದಿಂದ ಕನ್ನಡ ಪತ್ರಿಕೋದ್ಯಮದಲ್ಲಿದ್ದವರು. ಇವರು ಸಂಪಾದಕರಾಗಿದ್ದ ಸಂದರ್ಭದಲ್ಲಿ ವಿವಿಧ ಪತ್ರಿಕೆಗಳ ಮುಖಪುಟದಲ್ಲಿ ಪಕ್ಷಿಗಳ, ವನ್ಯ ಜೀವಿಗಳ ಚಿತ್ರಗಳು ರಾರಾಜಿಸುತ್ತಿದ್ದವು. ” ಹಕ್ಕಿಗಳ ಚಿತ್ರ ತೆಗೆಯಬೇಕು ಎಂದಾಕ್ಷಣ ಮಕ್ಕಳಿಗೂ ಕ್ಯಾಮರಾ ತೆಗೆದುಕೊಡಬೇಡಿ. ಒಂದಷ್ಟು ಕಾಲ ಪರಿಸರವನ್ನು ಸೂಕ್ಷ್ಮವಾಗಿ ಗಮನಿಸಲಿ. ನಂತರ ಫೋಟೊ ತೆಗೆಯುವಂತೆ ಕಲಿಸಿಕೊಡಿ ಎನ್ನುವ ಶಿವಸುಬ್ರಹ್ಮಣ್ಯ, ಸುಮಾರು 10 ಲಕ್ಷದಷ್ಟು ಹಕ್ಕಿಗಳ ಚಿತ್ರವನ್ನುತೆಗೆಯಲು ಖರ್ಚು ಮಾಡಿದ್ದೇನೆ, ಕ್ಯಾಮರಾ, ಟೆಲಿಲೆನ್ಸ್‌ ಸೇರಿದಂತೆ ಇತ್ಯಾದಿಗಳು ಖರ್ಚಾಗುತ್ತವೆ. ಆದರೆ ಒಂದು ರೂಪಾಯಿಯ ಆದಾಯವೂ ಅದರಲ್ಲಿಲ್ಲ. ಅದೊಂದು ಆಸಕ್ತಿ ಹಾಗೂ ಹವ್ಯಾಸ ಅಷ್ಟೇ. ಅದರಲ್ಲಿ ಖುಷಿ ಸಿಗುತ್ತದೆ” ಎನ್ನುತ್ತಾ ಅವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

37 minutes ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

2 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

3 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

15 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

18 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

23 hours ago