ಬಂಟ್ವಾಳ | ಪಕ್ಷಿಗಳಿಗಾಗಿ ಭೂಮಿ ಮೀಸಲಿಟ್ಟ ಅಪರೂಪದ ಪರಿಸರ ಪ್ರೇಮಿ…! | ತಾಯಿಯ ಉತ್ತರಕ್ರಿಯೆಯಂದು ಹಸಿರು ಆರಾಧನೆ ಯೋಜನೆ…! |

March 17, 2022
12:21 AM

ಬಂಟ್ವಾಳ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕೃಷಿಕ, ಪರಿಸರ ಪ್ರೇಮಿ, ಪಕ್ಷಿ ಪ್ರೇಮಿ ನಿತ್ಯಾನಂದ ಶೆಟ್ಟಿ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಪಕ್ಷಿಗಳಿಗಾಗಿ ಮೀಸಲಿಟ್ಟಿದ್ದಾರೆ. ಇಲ್ಲಿ ಹಾಗುವ ಯಾವುದೇ ಹಣ್ಣುಗಳನ್ನು ತೆಗೆಯದೆ ಪಕ್ಷಿಗಳಿಗೆ ತಿನ್ನಲು ಬಿಡುತ್ತಿದ್ದಾರೆ.  ತೋಟದಲ್ಲಿ ಪಕ್ಷಿಗಳಿಗಾಗಿ ಅಲ್ಲಲ್ಲಿ ಗೂಡುಗಳನ್ನು ಕೂಡಾ ನಿರ್ಮಿಸಿದ್ದಾರೆ.

ಇತ್ತೀಚೆಗೆ ನಿತ್ಯಾನಂದ ಶೆಟ್ಟಿ ಅವರ ತಾಯಿ  ನಿಧನರಾದರು. ಅವರ ಅಂತ್ಯಕ್ರಿಯೆ ವೇಳೆ ಮಾವಿನ ಮರವನ್ನು ಕಡಿಯಲಾಗಿತ್ತು.  ಇದಕ್ಕಾಗಿ ತಾಯಿಯ ಉತ್ತರಕ್ರಿಯೆ ದಿನ ಹಸಿರು ಆರಾಧನೆ ಎಂಬ ಯೋಜನೆ ಮಾಡಿದ್ದಾರೆ. ತಾಯಿಯ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಸುಮಾರು 20 ಬಗೆಯ ವಿವಿಧ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.

ಒಂದು ಮರವನ್ನು ಕಡಿದ ಕಾರಣದಿಂದಾಗಿ ಹಲವು ಗಿಡಗಳನ್ನು ನೆಟ್ಟು ಪರಿಸರದ ಮೇಲಿನ ತಮ್ಮ ಪ್ರೀತಿಯನ್ನು ತೋರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror