ಬಂಟ್ವಾಳ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕೃಷಿಕ, ಪರಿಸರ ಪ್ರೇಮಿ, ಪಕ್ಷಿ ಪ್ರೇಮಿ ನಿತ್ಯಾನಂದ ಶೆಟ್ಟಿ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಪಕ್ಷಿಗಳಿಗಾಗಿ ಮೀಸಲಿಟ್ಟಿದ್ದಾರೆ. ಇಲ್ಲಿ ಹಾಗುವ ಯಾವುದೇ ಹಣ್ಣುಗಳನ್ನು ತೆಗೆಯದೆ ಪಕ್ಷಿಗಳಿಗೆ ತಿನ್ನಲು ಬಿಡುತ್ತಿದ್ದಾರೆ. ತೋಟದಲ್ಲಿ ಪಕ್ಷಿಗಳಿಗಾಗಿ ಅಲ್ಲಲ್ಲಿ ಗೂಡುಗಳನ್ನು ಕೂಡಾ ನಿರ್ಮಿಸಿದ್ದಾರೆ.
ಇತ್ತೀಚೆಗೆ ನಿತ್ಯಾನಂದ ಶೆಟ್ಟಿ ಅವರ ತಾಯಿ ನಿಧನರಾದರು. ಅವರ ಅಂತ್ಯಕ್ರಿಯೆ ವೇಳೆ ಮಾವಿನ ಮರವನ್ನು ಕಡಿಯಲಾಗಿತ್ತು. ಇದಕ್ಕಾಗಿ ತಾಯಿಯ ಉತ್ತರಕ್ರಿಯೆ ದಿನ ಹಸಿರು ಆರಾಧನೆ ಎಂಬ ಯೋಜನೆ ಮಾಡಿದ್ದಾರೆ. ತಾಯಿಯ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಸುಮಾರು 20 ಬಗೆಯ ವಿವಿಧ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.
ಒಂದು ಮರವನ್ನು ಕಡಿದ ಕಾರಣದಿಂದಾಗಿ ಹಲವು ಗಿಡಗಳನ್ನು ನೆಟ್ಟು ಪರಿಸರದ ಮೇಲಿನ ತಮ್ಮ ಪ್ರೀತಿಯನ್ನು ತೋರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…