ಬಂಟ್ವಾಳ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕೃಷಿಕ, ಪರಿಸರ ಪ್ರೇಮಿ, ಪಕ್ಷಿ ಪ್ರೇಮಿ ನಿತ್ಯಾನಂದ ಶೆಟ್ಟಿ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಪಕ್ಷಿಗಳಿಗಾಗಿ ಮೀಸಲಿಟ್ಟಿದ್ದಾರೆ. ಇಲ್ಲಿ ಹಾಗುವ ಯಾವುದೇ ಹಣ್ಣುಗಳನ್ನು ತೆಗೆಯದೆ ಪಕ್ಷಿಗಳಿಗೆ ತಿನ್ನಲು ಬಿಡುತ್ತಿದ್ದಾರೆ. ತೋಟದಲ್ಲಿ ಪಕ್ಷಿಗಳಿಗಾಗಿ ಅಲ್ಲಲ್ಲಿ ಗೂಡುಗಳನ್ನು ಕೂಡಾ ನಿರ್ಮಿಸಿದ್ದಾರೆ.
ಇತ್ತೀಚೆಗೆ ನಿತ್ಯಾನಂದ ಶೆಟ್ಟಿ ಅವರ ತಾಯಿ ನಿಧನರಾದರು. ಅವರ ಅಂತ್ಯಕ್ರಿಯೆ ವೇಳೆ ಮಾವಿನ ಮರವನ್ನು ಕಡಿಯಲಾಗಿತ್ತು. ಇದಕ್ಕಾಗಿ ತಾಯಿಯ ಉತ್ತರಕ್ರಿಯೆ ದಿನ ಹಸಿರು ಆರಾಧನೆ ಎಂಬ ಯೋಜನೆ ಮಾಡಿದ್ದಾರೆ. ತಾಯಿಯ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಸುಮಾರು 20 ಬಗೆಯ ವಿವಿಧ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.
ಒಂದು ಮರವನ್ನು ಕಡಿದ ಕಾರಣದಿಂದಾಗಿ ಹಲವು ಗಿಡಗಳನ್ನು ನೆಟ್ಟು ಪರಿಸರದ ಮೇಲಿನ ತಮ್ಮ ಪ್ರೀತಿಯನ್ನು ತೋರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…