ಬಂಟ್ವಾಳ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕೃಷಿಕ, ಪರಿಸರ ಪ್ರೇಮಿ, ಪಕ್ಷಿ ಪ್ರೇಮಿ ನಿತ್ಯಾನಂದ ಶೆಟ್ಟಿ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಪಕ್ಷಿಗಳಿಗಾಗಿ ಮೀಸಲಿಟ್ಟಿದ್ದಾರೆ. ಇಲ್ಲಿ ಹಾಗುವ ಯಾವುದೇ ಹಣ್ಣುಗಳನ್ನು ತೆಗೆಯದೆ ಪಕ್ಷಿಗಳಿಗೆ ತಿನ್ನಲು ಬಿಡುತ್ತಿದ್ದಾರೆ. ತೋಟದಲ್ಲಿ ಪಕ್ಷಿಗಳಿಗಾಗಿ ಅಲ್ಲಲ್ಲಿ ಗೂಡುಗಳನ್ನು ಕೂಡಾ ನಿರ್ಮಿಸಿದ್ದಾರೆ.
ಇತ್ತೀಚೆಗೆ ನಿತ್ಯಾನಂದ ಶೆಟ್ಟಿ ಅವರ ತಾಯಿ ನಿಧನರಾದರು. ಅವರ ಅಂತ್ಯಕ್ರಿಯೆ ವೇಳೆ ಮಾವಿನ ಮರವನ್ನು ಕಡಿಯಲಾಗಿತ್ತು. ಇದಕ್ಕಾಗಿ ತಾಯಿಯ ಉತ್ತರಕ್ರಿಯೆ ದಿನ ಹಸಿರು ಆರಾಧನೆ ಎಂಬ ಯೋಜನೆ ಮಾಡಿದ್ದಾರೆ. ತಾಯಿಯ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಸುಮಾರು 20 ಬಗೆಯ ವಿವಿಧ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.
ಒಂದು ಮರವನ್ನು ಕಡಿದ ಕಾರಣದಿಂದಾಗಿ ಹಲವು ಗಿಡಗಳನ್ನು ನೆಟ್ಟು ಪರಿಸರದ ಮೇಲಿನ ತಮ್ಮ ಪ್ರೀತಿಯನ್ನು ತೋರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…