ಸುಳ್ಯ ತಾಲೂಕಿನ ಕಲ್ಮಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಲಾಭಿವೃದ್ಧಿ ಸಮಿತಿ , ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಪಕ್ಷಿಗಳ ಛಾಯಾಚಿತ್ರ ಪ್ರದರ್ಶನ ನಡೆಯಿತು.
ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹಾಗೂ ರಾಧಾಕೃಷ್ಣ ಉಡುವೆಕೋಡಿ ಅವರು ತೆಗೆದಿರುವ ಪಕ್ಷಿಗಳ ಚಿತ್ರ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಶಾಲಾಮುಖ್ಯ ಶಿಕ್ಷಕಿ ವಜ್ರಾಕ್ಷಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ, ಕೃಷಿಕ ವನ್ಯಜೀವಿ ಛಾಯಾಗ್ರಾಹಕ ರಾಧಾಕೃಷ್ಣ ಉಡುವೆಕೋಡಿ , ನಿವೃತ್ತ ಶಿಕ್ಷಕ ಸುಬ್ರಾಯ ಓಣಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪಕ್ಷಿಗಳ ಚಿತ್ರವನ್ನು ವೀಕ್ಷಿಸಿದರು. ಮಕ್ಕಳಿಗಾಗಿ ವಿಶೇಷವಾದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಹಕ್ಕಿಗಳ ಪರಿಚಯ ಹಾಗೂ ವಿವರಣೆಯ ಮೂಲಕ ಮಕ್ಕಳಲ್ಲಿ ಪರಿಸರ ಆಸಕ್ತಿಯನ್ನು ಮೂಡಿಸುವ ಪ್ರಯತ್ನ ನಡೆಸಲಾಯಿತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…