Advertisement
ಮೌನ ಮಾತಾದಾಗ

ಒಂದು ಮುಂಜಾನೆ….. ಒಂದು ಹಕ್ಕಿಯ ಕತೆ…. | ಅಂದು ಹಕ್ಕಿಯ ಗೂಡಲ್ಲಿ ಅಲ್ಲೋಲ ಕಲ್ಲೋಲ…! |

Share

ಸದ್ದಿರದ ಪಸುರೊಡೆಯ ಮಲೆನಾಡ ಬನಗಳಲಿ
ಮೊರೆವ ತೊರೆಯೆಡೆಯಲ್ಲಿ ಗುಡಿಸಲೊಂದಿರಲಿ
ಅಲ್ಲಿ ಗಿಳಿ ಗೊರವಂಕ ಕೋಗಿಲೆಗಳಿಂಚರವು
ಅಲೆಯು ಅಲೆಯಾಗಿ ತೇಲಿ ಬರುತಿರಲಿ……. (ಕುವೆಂಪು)

ಆಹ್…….
ಕಲ್ಮಡ್ಕದ ಮಣ್ಣಿನ ಗುಣವೇ ಅಂತಹದು…!. ಕಲ್ಮಡ್ಕ…  ಕಲಾವಿದರ, ವಿದ್ಯಾರಾಧಕರ, ಪ್ರಕೃತಿಪ್ರಿಯರ, ಕಲಾರಸಿಕರ ಊರು. ಕಲ್ಮಡ್ಕದ ದಕ್ಷಿಣಕ್ಕೆ ಕಿರೀಟಪ್ರಾಯವಾಗಿ ತಲೆಯೆತ್ತಿ ನಿಂತ ಬಂಟಮಲೆ ಹಸಿರ ಶಿಖರ…ಅದರ ಉತ್ತರ ತಪ್ಪಲಿನ ಕಲ್ಮಡ್ಕದ ಕೃಷಿ ಪ್ರದೇಶದ ಜನಜೀವನ.. ಆಹಾ…ಪ್ರಕೃತಿಯ ರಮಣೀಯ ಸೊಬಗೇ….

ಹೌದು, ಇಲ್ಲಿ ಕೃಷಿಕನಿಗೆ ಕೃಷಿಯ ಸೆಲೆಯಿದೆ, ಓದುಗನಿಗೆ ಜ್ಞಾನ ಸಾಗರವಿದೆ, ಸಾತ್ವಿಕ ಸಜ್ಜನರಿಗೆ ಪೂರ್ವ ಪರಂಪರೆಯ ರಕ್ಷೆಯಿದೆ, ಕಲಾವಿದನಿಗೆ ಕಲೆಯ ಬೇರುಗಳಿವೆ,ರಸಿಕನಿಗೆ ರಸಗವಳದ ಅವಕಾಶಗಳಿವೆ…

ಇಂತಿರ್ಪೊಡೆ…,
ಪ್ರಕೃತಿಯ ನಿತ್ಯ ಸತ್ಯಗಳನ್ನರಿಯುವ ಛಲಗಾರರೂ ಇದ್ದಾರೆ….ಈ ಎಲ್ಲಾ ಮಹತ್ತುಗಳ ಹಿನ್ನೆಲೆಯಲ್ಲಿ ಪಕ್ಷಿಗಳ ಚಲನವಲನಗಳನ್ನು ಗಮನಿಸುತ್ತಾ ,ದಾಖಲಿಸಿಕೊಳ್ಳುವ ಹವ್ಯಾಸೀ ಪರಿಸರ ಪ್ರೇಮಿಗಳೂ ಇದ್ದಾರೆ.ಅಂಥವರ ವಿಶೇಷ ಆಸಕ್ತಿ ಇದೆಯಲ್ಲಾ…ತಪಸ್ಸೇ ಸರಿ…

ಹಾಂ…, ನಮ್ಮ ಮನೆಯ ಛಾವಣಿಯಲ್ಲೂ ಹಕ್ಕಿಗಳ ಗೂಡಿದೆ, ಹಕ್ಕಿಗಳ ಸಂಸಾರದ ಚಿಲಿಪಿಲಿಯ ಸೊಬಗಿದೆ….ನಿತ್ಯವೂ ಬೆಳಗಿನ ಜಾವ ಮತ್ತು ಸಂಜೆಯ ವೇಳೆ ಅವುಗಳ ಓಡಾಟ…ತಾಯಿ ಹಕ್ಕಿ ಮರಿಹಕ್ಕಿಗಳಿಗೆ ಪೋಷಣೆಯ ಒನಪು ವೈಯ್ಯಾರ…ವಾವ್ …ನೋಡುವುದೇ ಖುಷಿ. ಈ ಗೂಡಿನಲ್ಲಿ ಇರುವ ನಾಲ್ಕು ಹಕ್ಕಿಗಳೂ ಸಂಜೆ ಜೊತೆಯಾಗಿ ತಮ್ಮ ನೆಲೆಗೆ ಬರುವ, ಬಂದು ಚಿಲಿಪಿಲಿಗುಟ್ಟುತ್ತಾ…ಮೌನವಾಗುತ್ತಾ ನಿದ್ರಿಸುವ ಪರಿಯೋ…ವಾವ್..ವಾವ್..

ಅಬ್ಬಾ….! , ಈ ವರ್ಷದ ಮೊದಲ ಮಳೆಯ ಅಬ್ಬರದಲ್ಲೊಂದು ದಿನ ಮುಸ್ಸಂಜೆಯ ಹೊತ್ತು….ವರುಣನಾರ್ಭಟದೊಂದಿಗೆ ಚಟ್ ಛಟಾರನೆಂದು ಕೋರೈಸಿ ಆರ್ಭಟಿಸಿದ ಸಿಡಿಲು ಮಿಂಚಿನ ಗದ್ದಲಕ್ಕೆ ಜೊತೆಯಾಗಿ ಬಂದ ಹಕ್ಕಿಗಳಲ್ಲಿ, ಇನ್ನೇನು ಗೂಡು ಸೇರಬೇಕಿದ್ದ ಒಂದು ಮರಿ ನಮ್ಮ ಮನೆಯೊಳಗಣ ವಿದ್ಯುತ್ ಬೆಳಕಿಗೆ ಆಕರ್ಷಿತವಾಗಿ ದಾರಿ ತಪ್ಪಿ ಮನೆಯೊಳಗೆ ಬಂದಾಗ ನಮ್ಮ ಮಕ್ಕಳಿಗಾದ ನೋವು ಅಷ್ಟಿಷ್ಟಲ್ಲ…. ಹೆದರಿ ಬಸವಳಿದು.. ಅಂತೂ ಗೋಡೆಯ ಮೂಲೆಯಲ್ಲಿ ಹೆದರಿ ಕುಳಿತ ಹಕ್ಕಿಗೆ ಮಕ್ಕಳಿಂದ ಅನ್ನ ಕಾಳುಗಳ ಉಪಚಾರ ಮೊದಲ್ಗೊಂಡು… ಬೆಕ್ಕಿನ ಕಾಟದಿಂದ ರಕ್ಷಣೆಗಾಗಿ ಒಂದು ಪೆಟ್ಟಿಗೆಯೊಳಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಆದ ನಂತರವೇ ನಾವೆಲ್ಲ ನಿದ್ರಿಸಿದ್ದು… ಅಂತೂ ಮರುದಿನ ಬೆಳಗ್ಗೆ ಈ ಹಕ್ಕಿಯನ್ನು ಗೂಡಿನ ಬಳಿ ತಂದು ಬಿಟ್ಟಾಗ ಹಾರಿ ಹಾರಿ ಚಿಲಿಪಿಲಿ ಗುಟ್ಟಿ ಸಂತಸಪಟ್ಟು ತನ್ನ ಗೂಡಿನೊಳಗೊಮ್ಮೆ ಹೋಗಿ ತನ್ನ ಸಂಗಡಿಗರೊಂದಿಗೆ ಸಂಭ್ರಮಿಸಿ… ಜೊತೆಯಾಗಿ ಹಾರಿ ಹೊರಹೋದಾಗ ನಾವೂ ಸಂಭ್ರಮಿಸಿದ್ದು ಸುಳ್ಲಲ್ಲ.ಇವುಗಳ ಪೈಕಿ ಸಂಜೆಯಾದಂತೆ ಒಂದೆರಡು ಹಕ್ಕಿಗಳು ಬಂದು ಮನೆಯೆದುರಿನ ತಂತಿಯ ಮೇಲೆ ಕುಳಿತು ಚಿಲಿಪಿಲಿ ಮಾಡುತ್ತಾ ಅತ್ತಿತ್ತ ನೋಡುತ್ತಾ, ಜೊತೆಗಾರರು ಬಂದಾಗ ಓಡಿ ಬಂದು ತಮ್ಮ ಗೂಡಿಗೆ ನುಗ್ಗುವ ಪರಿ… ಜೀವ ಸೆಲೆಯ,ನೆಲೆಯ ಆಕರ್ಷಣೆ………ಇದೆಲ್ಲವನ್ನೂ ನೋಡುತ್ತಾ ಮನದಲ್ಲಿ ವಾವ್..ಜಗನಿಯಮದ ಲಯವೇ ಎಂದೆಣಿಸುತ್ತಾ …..

“ತ್ವಮೇವ ಪ್ರತ್ಯಕ್ಷಂ ತತ್ವಮಸಿ |ತ್ವಮೇವ ಕೇವಲಂ ಕರ್ತಾಸಿ| ತ್ವಮೇವ ಕೇವಲಂ ಧರ್ತಾಸಿ| ತ್ವಮೇವ ಕೇವಲಂ ಹರ್ತಾಸಿ| ತ್ವಮೇವ ಸರ್ವಂ ಖಲ್ವಿದಂ ಬ್ರಹ್ಮಾಸಿ|….

ಎಂದು ಜಪಿಸಿದ್ದೂ ಇದೆ.

ಹುಮ್….. , ಒಂದು ರಾತ್ರಿ ಇವುಗಳ ಗೂಡಲ್ಲಿ ಅಲ್ಲೋಲ ಕಲ್ಲೋಲ.. ಹಕ್ಕಿಗಳ ಆರ್ತನಾದ….ಪುಟ್ಟ ಪುಟ್ಟ ಮೊಟ್ಟೆಗಳು ಕೆಳಗೆ ಬಿದ್ದು ಛಿದ್ರ….. .ಯಬ್ಬಾ..ಏನಾಯಿತೆಂದು ನೋಡಿದರೆ.. ಇಲಿರಾಯನ ದಾಳಿ…ಮರು ದಿವಸ ಹೊರ ಹೋದ ಹಕ್ಕಿಗಳು ಬರಲೇ ಇಲ್ಲ…..ಅದರೆ ಮನೆಯೆದುರಿನ ರಂಬುಟಾನ್ ಮರದ ಎಲೆಗಳೆಡೆಯಲ್ಲಿ ಅವು ಮನೆ ಮಾಡಿದ್ದು ಕಂಡು ಮನಸಿಗೆ ಹಿತವೆನಿಸಿತು….ಮತ್ತೆಷ್ಟೋ ಸಮಯ ಕಳೆದಾಗ ಪುನಃ ಇದೇ ಗೂಡಲ್ಲಿ ಸಂಸಾರ ಶುರುವಾದಾಗ ಖುಷಿಯೋ ಖುಷಿ…. ಮರಿ ಹಕ್ಕಿಗಳಿಗೆ ಪೋಷಣೆ, ಗೂಡಿನ ಒಳಗೇ ರೆಕ್ಕೆ ಬಡಿಯಲು ತರಬೇತಿ,ಹೊರಗೆ ಹಾರಲು ತರಬೇತಿ,ಮೊದಲ ಬಾರಿಗೆ ಮರಿ ಹೊರಗೆ ಹಾರಿದಾಗ ಅಮ್ಮನ ಬೆಂಗಾವಲು…ಮೊದಲ ಹಾರಾಟದಲ್ಲಿ ಮುಗ್ಗರಿಸಿದ ಮರಿಗೆ ಜತೆಯಾಗಿ ಸಾಥ್ ಕೊಡುವ ಹಿರಿ ಹಕ್ಕಿ… ಆ ಮೇಲೆ ಒಂದಷ್ಟು ದೂರದ ಟ್ರಯಲ್ ಹಾರಾಟ….ವಾವ್….ಏನು ಜೀವನೋತ್ಸಾಹ……ಇದನ್ನೆಲ್ಲ ನೋಡಲು, ಆಸ್ವಾದಿಸಲು ಒಳನೋಟ ಇರಬೇಕಲ್ಲವೇ…
ಚಿತ್ರ: ಶಿವಸುಬ್ರಹ್ಮಣ್ಯ ಕೆ

ಹೌದು…., ಇಂತಿರುವಾಗ, ನಮ್ಮ ಕಲ್ಮಡ್ಕದ ಶಿವಣ್ಣ,ರಾಧಣ್ಣ .. ..ಇವರುಗಳ ಪಕ್ಷಿ ಪ್ರೇಮದ ಛಾಯಾಗ್ರಹಣ ನಮಗೆಲ್ಲ ದೀಪಗೋಪುರವಾದದ್ದು ಸತ್ಯ. ವಾವ್..ರಾಧಣ್ಣಾ..ಶಿವಣ್ಣಾ…ನಿಮ್ಮಗಳದ್ದು ತಪಸ್ಸೇ ಸರಿ……ನಿಮ್ಮ ಛಾಯಾಚಿತ್ರಗಳನ್ನು ನೋಡಿ ಅನುಭವಿಸುವುದೇ ರೋಮಾಂಚನ.

ಚಿತ್ರ : ಶಿವಸುಬ್ರಹ್ಮಣ್ಯ ಕೆನಿಜ ನಿಜ….., ನಮ್ಮ ನಿಜ ಸಂಪತ್ತು ಅಂದ್ರೆ ಯಾವುದು…ಸುಖ ಶಾಂತಿ ಮನದ ನೆಮ್ಮದಿಯೇ ಅಲ್ವೇ……ಅದು ನಿಮಗಿದೆ. ಪ್ರಕೃತಿಯ ಮಡಿಲಲ್ಲಿ ಟೆಂಟ್ ಹಾಕಿ ಝಂಡಾ ಊರ್ಬೇಕಂದ್ರೇ,ತಾಳ್ಮೆಯಿಂದ ಕಾಯಬೇಕಾದರೆ ನಿಮ್ಮಲ್ಲಿ ಆ ಪ್ರಶಾಂತ ಮನಸ್ಥಿತಿ ಇರಲೇಬೇಕು. ಪ್ರಕೃತಿಯ ವೈಭವ ಏನಿದ್ರೂ ಮೌನದಲೆಯಲ್ಲೇ ಹೊರತು ಗೌಜುಗದ್ದಲದಲ್ಲಲ್ಲ.ಅದಕ್ಕಾಗಿ ನೀವೂ ಎಲ್ಲರೊಳಗೊಂದಾಗ ಬೇಕಲ್ವೇ… ಅಂದ್ರೆ ಶಾಂತವಾಗಿ ದಿನಗಟ್ಟಲೆ ಕಾಯಲೇ ಬೇಕು.ನದಿ ತೊರೆ ಗಿರಿ ಬೆಟ್ಟಗಳೆನ್ನದೆ ,ಮಳೆ ಚಳಿಯೆನ್ನದೆ ಅನುಸರಿಸಬೇಕಲ್ವೇ….ಅದನ್ನೇ ನಮ್ಮೂರಿನ ಹಿರಿಯರಾದ ಸುಬ್ರಾಯ ಅಣ್ಣನವರು ನಿಮ್ಮ ಛಾಯಾಗ್ರಹಣದ ಛಲವನ್ನು ತಪಸ್ಸೆಂದದ್ದಿರಬಹುದು.ಕ್ಯಾಮರಾದೊಂದಿಗೆ ಸಹಬಾಳ್ವೆ , ಕಾಯುವಿಕೆಗಿಂತನ್ಯ ತಪವು ಇಲ್ಲಾ ಎಂಬ ದೃಢ ಸಂಕಲ್ಪದಿಂದ ಮಾತ್ರ ಸಾದ್ಯ….ನೀವು ತಾಳ್ಮೆಗೆಟ್ಟರೆ ಕ್ಯಾಮರವೂ ತಾಳ್ಮೆಗೆಟ್ಟೀತಲ್ವೇ….

ಚಿತ್ರ: ರಾಧಾಕೃಷ್ಣ ರಾವ್‌ ಯು

ಎಸ್……, ಸುಬ್ರಾಯ ಅಣ್ಣನವರೆಂದಂತೆ ಕಲ್ಮಡ್ಕದಲ್ಲಿ ಕ್ಯಾಮರಾದೊಂದಿಗೆ ತಾಳ್ಮೆಯ ತಪವನ್ನಾಚರಿಸುವವರು ಇಬ್ಬರು…
ಒಬ್ಬರು ಶಿವಸುಬ್ರಹ್ಮಣ್ಯ ಕುಂಞಹಿತ್ಲು ಮತ್ತೊಬ್ಬರು ಉಡುವೆಕೋಡಿ ರಾಧಾಕೃಷ್ಣ ರಾವ್. ಶಿವಸುಬ್ರಹ್ಮಣ್ಯ ಅವರು ಅನುಭವೀ ಪತ್ರಕರ್ತರು, ನಾಡಿನ ಗಣ್ಯ ಪತ್ರಿಕೆಗಳಲ್ಲಿ ಸಂಪಾದಕರಾಗಿ ಶ್ರಮಿಸಿದವರು. ಅಂತೆಯೇ ಪಕ್ಷಿ ಪ್ರೇಮ ಬೆಳೆಸಿಕೊಂಡು ಹವ್ಯಾಸಿ ಛಾಯಾಗ್ರಹಣಗಳನ್ನೂ ಮಾಡಿದವರು. ಹಾಗೇ ಉಡುವೆಕೋಡಿ ರಾಧಾಕೃಷ್ಣ ರಾವ್ ಅವರು ಅತ್ಯುತ್ತಮ ಕೃಷಿಕರು, ಯಕ್ಷಗಾನ ಪ್ರೇಮಿ, ಉತ್ತಮ ವಾಲಿಬಾಲ್,ಬ್ಯಾಡ್ಮಿಂಟನ್ ಆಟಗಾರ, ಸ್ನೇಹ ಜೀವಿ….ಅಂತೆಯೇ ಹವ್ಯಾಸಿ ಛಾಯಾಗ್ರಾಹಕರು. ಮನೆಯಿಂದ ಹೊರ ಹೊರಡುವಾಗ ಪರ್ಸನ್ನಾದರೂ ಮರೆತಾರು….ಕೆಮರಾ ಮರೆಯಲಾರದವರು. ಇವರಿಬ್ಬರೂ ತಮ್ಮ ಹವ್ಯಾಸೀ ಛಾಯಾಚಿತ್ರಗಳನ್ನು ಫೇಸ್ಬುಕ್ಕಲ್ಲಿ ಹಂಚಿಕೊಳ್ಳೋದರೊಂದಿಗೆ ತಮ್ಮ ಸಂತಸವನ್ನು ಇಮ್ಮಡಿಗೊಳಿಸಿ ಕೊಳ್ಳುವುದರೊಂದಿಗೆ ನಮ್ಮನ್ನೂ ಆ ಕಡೆಗೆ ಸೆಳೆಯುವುತ್ತಿರುವುದು ಸುಳ್ಳಲ್ಲ. ಅವರ ಫೇಸ್ಬುಕ್ ಚಿತ್ರಗಳಿಗೆ ಒಂದೆರಡು ಮೆಚ್ಚುಗೆಯ ಬರಹ ಬರೆಯುತ್ತಾ ನಾವೂ ಅವರೊಂದಿಗೆ ಪ್ರಕೃತಿಯ ಚೆಲುವನ್ನು ಸವಿಯುತ್ತಿರುವುದು ನಿತ್ಯ ಸತ್ಯ. ಅವರ ಫೇಸ್ಬುಕ್ ಚಿತ್ರಗಳನ್ನು ಪ್ರೋತ್ಸಾಹಿಸೋಣ ಎಂಬ ಆಶಯದೊಂದಿಗೆ, ಹಸಿರೇ ಉಸಿರೆಂಬ ತಪವಗೈವ ಕೃಷಿಕರಾದ ನಾವೆಲ್ಲರೂ ಪಕ್ಷಿ ಮತ್ತು ಪರಿಸರ ಪ್ರೇಮಿಗಳಾಗೋಣವಲ್ವೇ, ಪ್ರಕೃತಿಯ ವಿಸ್ಮಯಗಳನ್ನು ನೋಡುವ ಒಳ ದೃಷ್ಟಿ ನಮ್ಮಲ್ಲೂ ತುಂಬಿಕೊಳ್ಳೋಣ ಎನ್ನುತ್ತಾ…ಇದಕೆಲ್ಲ ಸ್ಪೂರ್ತಿಯ ಸೆಲೆಯಾದ ನಿಮಗೆ ಧನ್ಯವಾದಗಳು ರಾಧಣ್ಣಾ, ಶಿವಣ್ಣಾ.

# ಟಿ ಆರ್‌ ಸುರೇಶ್ಚಂದ್ರ ತೊಟ್ಟೆತ್ತೋಡಿ, ಕಲ್ಮಡ್ಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago