ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |

October 23, 2024
8:32 AM
ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ, ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.

ಪುತ್ತೂರಿನ ಪರ್ಪುಂಜದ ಸೌಗಂಧಿಕ ಆವರಣದಲ್ಲಿ ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ, ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.

Advertisement

ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ನ.1, ಶುಕ್ರವಾರ, ಸಂಜೆ 5ಕ್ಕೆ, ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಕುಮಾರ ಎಂ.ಕೆ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪಕ್ಷಿ ತಜ್ಞೆ, ವರ್ಣಚಿತ್ರ ಕಲಾವಿದೆ ಪಿ. ವಸಂತಿ ಸಾಮೆತ್ತಡ್ಕ, ಹಕ್ಕಿಗಳ ಕುರಿತಾಗಿ ಹಲವು ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ.
ಬೆಳಗ್ಗೆ 9 ರಿಂದ ಸಂಜೆ 6ರ ವೆರೆಗೆ ಒಂಭತ್ತು ದಿನಗಳ ಕಾಲ ನಡೆಯಲಿರುವ ಛಾಯಾಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಚಿತ್ರಗಳ ಖರೀದಿಗೂ ಅವಕಾಶ ಕಲ್ಪಿಸಲಾಗಿದೆ.

ಛಾಯಾಚಿತ್ರಗ್ರಾಹಕರ ಬಗ್ಗೆ:  ಪುತ್ತೂರು ವಿವೇಕಾನಂದ ಕಾಲೇಜಿನ ನಯನ ಫೊಟೋಗ್ರಫಿ ಕ್ಲಬ್ ಮೂಲಕ ಕ್ಯಾಮರಾ ಹಾಗೂ ಛಾಯಾಗ್ರಹಣದಲ್ಲಿ ಆಸಕ್ತಿ ಬೆಳಸಿಕೊಂಡ, ಅಭಿಷೇಕ.ಡಿ, ಪುತ್ತೂರಿನ ಸಂಪ್ಯ ನಿವಾಸಿ. ಮೂಲತಃ ಬಲ್ನಾಡಿನ ಪುಂಡಿತ್ತೂರಿನವರಾದ ಇವರು, ಪ್ರಸ್ತುತ ನವದೆಹಲಿಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಟೈಮ್ಸ್ ಇಂಟರ್ನೆಟ್ ಸಂಸ್ಥೆಯಲ್ಲಿ ಅಸಿಸ್ಟೆಂಟ್ ಪ್ರೊಡಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2012-13 ರಿಂದ ಫೊಟೋಗ್ರಫಿಯ ಹವ್ಯಾಸ ಬೆಳೆಸಿಕೊಂಡ ಇವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ಪಕ್ಷಿ-ವನ್ಯ ಜೀವಿಗಳ ಕುರಿತಾಗಿ ಅವುಗಳ ಜೀವನ ಹಾಗೂ ಛಾಯಾಗ್ರಹಣದತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಅಂತೆಯೇ “Abhijna-capturing moments” ಲೋಗೋದಡಿ, ತಮ್ಮ ಫೊಟೋಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: 9945854213 – ಅಭಿಷೇಕ ಡಿ. ಪುಂಡಿತ್ತೂರು, 9900409380- ಚಂದ್ರ ಸೌಗಂಧಿಕ

 

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಡಿಪುರ ಅರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಚರ್ಚಿಸಿ ನಿರ್ಧಾರ | ಅರಣ್ಯ ಸಚಿವ ಈಶ್ವರ್ ಖಂಡ್ರೆ
March 29, 2025
9:58 AM
by: The Rural Mirror ಸುದ್ದಿಜಾಲ
ಬೇಸಿಗೆ ಹಿನ್ನೆಲೆ | ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಬಿಡುಗಡೆ ಕುರಿತು ಚರ್ಚೆ
March 29, 2025
9:54 AM
by: The Rural Mirror ಸುದ್ದಿಜಾಲ
ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್
March 29, 2025
9:49 AM
by: The Rural Mirror ಸುದ್ದಿಜಾಲ
ರಸಗೊಬ್ಬರಗಳ ಬೆಲೆ ಸ್ಥಿರವಾಗಿರಿಸಲು ಕ್ರಮ | 45 ಕೆ.ಜಿ. ಯೂರಿಯಾ ಬೆಲೆ 242 ರೂ.ಗೆ ನಿಗದಿ
March 29, 2025
9:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group