Advertisement
ಸುದ್ದಿಗಳು

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |

Share

ಪುತ್ತೂರಿನ ಪರ್ಪುಂಜದ ಸೌಗಂಧಿಕ ಆವರಣದಲ್ಲಿ ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ, ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.

ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ನ.1, ಶುಕ್ರವಾರ, ಸಂಜೆ 5ಕ್ಕೆ, ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಕುಮಾರ ಎಂ.ಕೆ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪಕ್ಷಿ ತಜ್ಞೆ, ವರ್ಣಚಿತ್ರ ಕಲಾವಿದೆ ಪಿ. ವಸಂತಿ ಸಾಮೆತ್ತಡ್ಕ, ಹಕ್ಕಿಗಳ ಕುರಿತಾಗಿ ಹಲವು ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ.
ಬೆಳಗ್ಗೆ 9 ರಿಂದ ಸಂಜೆ 6ರ ವೆರೆಗೆ ಒಂಭತ್ತು ದಿನಗಳ ಕಾಲ ನಡೆಯಲಿರುವ ಛಾಯಾಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಚಿತ್ರಗಳ ಖರೀದಿಗೂ ಅವಕಾಶ ಕಲ್ಪಿಸಲಾಗಿದೆ.

ಛಾಯಾಚಿತ್ರಗ್ರಾಹಕರ ಬಗ್ಗೆ:  ಪುತ್ತೂರು ವಿವೇಕಾನಂದ ಕಾಲೇಜಿನ ನಯನ ಫೊಟೋಗ್ರಫಿ ಕ್ಲಬ್ ಮೂಲಕ ಕ್ಯಾಮರಾ ಹಾಗೂ ಛಾಯಾಗ್ರಹಣದಲ್ಲಿ ಆಸಕ್ತಿ ಬೆಳಸಿಕೊಂಡ, ಅಭಿಷೇಕ.ಡಿ, ಪುತ್ತೂರಿನ ಸಂಪ್ಯ ನಿವಾಸಿ. ಮೂಲತಃ ಬಲ್ನಾಡಿನ ಪುಂಡಿತ್ತೂರಿನವರಾದ ಇವರು, ಪ್ರಸ್ತುತ ನವದೆಹಲಿಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಟೈಮ್ಸ್ ಇಂಟರ್ನೆಟ್ ಸಂಸ್ಥೆಯಲ್ಲಿ ಅಸಿಸ್ಟೆಂಟ್ ಪ್ರೊಡಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2012-13 ರಿಂದ ಫೊಟೋಗ್ರಫಿಯ ಹವ್ಯಾಸ ಬೆಳೆಸಿಕೊಂಡ ಇವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ಪಕ್ಷಿ-ವನ್ಯ ಜೀವಿಗಳ ಕುರಿತಾಗಿ ಅವುಗಳ ಜೀವನ ಹಾಗೂ ಛಾಯಾಗ್ರಹಣದತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಅಂತೆಯೇ “Abhijna-capturing moments” ಲೋಗೋದಡಿ, ತಮ್ಮ ಫೊಟೋಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: 9945854213 – ಅಭಿಷೇಕ ಡಿ. ಪುಂಡಿತ್ತೂರು, 9900409380- ಚಂದ್ರ ಸೌಗಂಧಿಕ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

8 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

9 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

9 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

9 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

9 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

17 hours ago