Advertisement
ಸುದ್ದಿಗಳು

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |

Share

ಪುತ್ತೂರಿನ ಪರ್ಪುಂಜದ ಸೌಗಂಧಿಕ ಆವರಣದಲ್ಲಿ ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ, ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.

ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ನ.1, ಶುಕ್ರವಾರ, ಸಂಜೆ 5ಕ್ಕೆ, ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಕುಮಾರ ಎಂ.ಕೆ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪಕ್ಷಿ ತಜ್ಞೆ, ವರ್ಣಚಿತ್ರ ಕಲಾವಿದೆ ಪಿ. ವಸಂತಿ ಸಾಮೆತ್ತಡ್ಕ, ಹಕ್ಕಿಗಳ ಕುರಿತಾಗಿ ಹಲವು ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ.
ಬೆಳಗ್ಗೆ 9 ರಿಂದ ಸಂಜೆ 6ರ ವೆರೆಗೆ ಒಂಭತ್ತು ದಿನಗಳ ಕಾಲ ನಡೆಯಲಿರುವ ಛಾಯಾಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಚಿತ್ರಗಳ ಖರೀದಿಗೂ ಅವಕಾಶ ಕಲ್ಪಿಸಲಾಗಿದೆ.

ಛಾಯಾಚಿತ್ರಗ್ರಾಹಕರ ಬಗ್ಗೆ:  ಪುತ್ತೂರು ವಿವೇಕಾನಂದ ಕಾಲೇಜಿನ ನಯನ ಫೊಟೋಗ್ರಫಿ ಕ್ಲಬ್ ಮೂಲಕ ಕ್ಯಾಮರಾ ಹಾಗೂ ಛಾಯಾಗ್ರಹಣದಲ್ಲಿ ಆಸಕ್ತಿ ಬೆಳಸಿಕೊಂಡ, ಅಭಿಷೇಕ.ಡಿ, ಪುತ್ತೂರಿನ ಸಂಪ್ಯ ನಿವಾಸಿ. ಮೂಲತಃ ಬಲ್ನಾಡಿನ ಪುಂಡಿತ್ತೂರಿನವರಾದ ಇವರು, ಪ್ರಸ್ತುತ ನವದೆಹಲಿಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಟೈಮ್ಸ್ ಇಂಟರ್ನೆಟ್ ಸಂಸ್ಥೆಯಲ್ಲಿ ಅಸಿಸ್ಟೆಂಟ್ ಪ್ರೊಡಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2012-13 ರಿಂದ ಫೊಟೋಗ್ರಫಿಯ ಹವ್ಯಾಸ ಬೆಳೆಸಿಕೊಂಡ ಇವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ಪಕ್ಷಿ-ವನ್ಯ ಜೀವಿಗಳ ಕುರಿತಾಗಿ ಅವುಗಳ ಜೀವನ ಹಾಗೂ ಛಾಯಾಗ್ರಹಣದತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಅಂತೆಯೇ “Abhijna-capturing moments” ಲೋಗೋದಡಿ, ತಮ್ಮ ಫೊಟೋಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: 9945854213 – ಅಭಿಷೇಕ ಡಿ. ಪುಂಡಿತ್ತೂರು, 9900409380- ಚಂದ್ರ ಸೌಗಂಧಿಕ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

3 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

14 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

18 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

19 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

21 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

22 hours ago